ಚಕ್ರವರ್ತಿ ಸಿನಿಮಾದಲ್ಲಿ ದೀಪಾ ಸನ್ನಿಧಿ 
ಸಿನಿಮಾ ಸುದ್ದಿ

'ಚಕ್ರವರ್ತಿ' ಜೀವನದಲ್ಲಿ ಬರಲಿದ್ದಾಳೆ ಶಾಂತಿ

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಕ್ರವರ್ತಿ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಚಿತ್ರ ನಟಿ ದೀಪಾ ಸನ್ನಿಧಿ ಹಾಗೂ ಸೃಜನ್ ಲೋಕೇಶ್...

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಕ್ರವರ್ತಿ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಚಿತ್ರ ನಟಿ ದೀಪಾ ಸನ್ನಿಧಿ ಹಾಗೂ ಸೃಜನ್ ಲೋಕೇಶ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಮೊದಲ ಹಂತದಲ್ಲಿ ನಟಿ ದೀಪಾ ಸನ್ನಿಧಿ ಹಾಗೂ ಸೃಜನ್ ಲೋಕೇಶ್ ರೊಂದಿಗೆ ಮೈಸೂರಿನಲ್ಲಿ ಚಿತ್ರೀಕರಣ ಆರಂಭಿಸಿರುವ ಚಿತ್ರದ ತಂಡ, ಇದೀಗ ಚಿತ್ರದಲ್ಲಿ ದೀಪಾ ಸನ್ನಿಧಿಯವರ ಪಾತ್ರದ ಮೊದಲ ನೋಟವನ್ನು ಬಿಡುಗಡೆ ಮಾಡಿದೆ. ಚಿತ್ರ ತಂಡ ಬಿಡುಗಡೆ ಮಾಡಿರುವ ಚಿತ್ರದಲ್ಲಿ ದೀಪಾ ಸನ್ನಿಧಿಯವರ ಪಾತ್ರ ಗೃಹಿಣಿ ಪಾತ್ರದಲ್ಲಿರುವಂತೆ ತೋರುತ್ತಿದ್ದು, ಚಿತ್ರದಲ್ಲಿ ದೀಪಾ ಅವರು ಶಾಂತಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.

ಚಿತ್ರದಲ್ಲಿನ ತಮ್ಮ ಪಾತ್ರದ ಕುರಿತಂತೆ ಮಾತನಾಡಿರುವ ದೀಪಾ, ಇದೊಂದು ಹೊಸ ಕಥೆಯಾಗಿದೆ. ಭೂಗತ  ಹಿನ್ನೆಲೆಯಿರುವ ಮನೆಯಲ್ಲಿ ಶಾಂತಿ ತರುವ ಪಾತ್ರ ಇದಾಗಿದೆ. ಚಿತ್ರದಲ್ಲಿ ಯಾವುದೇ ರೀತಿಯ ರೊಮಾನ್ಸ್ ಇಲ್ಲ. ಇದೊಂದು ಹೊಸ ಪಾತ್ರವಾಗಿದ್ದು, ದರ್ಶನ್ ಅವರಿಗೂ ಇದೊಂದು ಹೊಸ ಪಾತ್ರವಾಗಿದೆ ಎಂದು ಕೊಂಡಿದ್ದೇನೆಂದು ಹೇಳಿದ್ದಾರೆ.

ಚಿತ್ರದಲ್ಲಿ ದರ್ಶನ್ ಅವರೊಂದಿಗೆ ನಿರ್ಣಾಯಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಪಾತ್ರ ಭಾವನಾತ್ಮಕವಾಗಿದ್ದು, ಇದೇ ನನ್ನಲ್ಲಿರುವ ಆಸಕ್ತಿಯನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಚಕ್ರವರ್ತಿಯಲ್ಲಿ ನನ್ನ ಪ್ರಯಾಣ ಆರಂಭವಾಗಿದ್ದು, ಇದು ಆರಂಭಿಕವಷ್ಟೇ ಎಂದು ಹೇಳಿದ್ದಾರೆ.

ಪ್ರಸ್ತುತ ಚಿತ್ರದ ತಂಡ ಹೈದರಾಬಾದ್ ನಲ್ಲಿ ಬೀಡುಬಿಟ್ಟಿದ್ದು, ಚಿತ್ರೀಕರಣಕ್ಕೆ ಉತ್ತಮ ತಾಣಗಳನ್ನು ಹುಡುಕುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಚಿತ್ರೀಕರಣಕ್ಕೆ ಉತ್ತಮ ತಾಣಗಳು ಸಿಗುತ್ತಿಲ್ಲ. ಎದುರಾಳಿ ಪಾತ್ರದಲ್ಲಿ ದಿನಕರ್ ಅವರು ನಟಿಸುತ್ತಿದ್ದು, ಆದಿತ್ಯ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಎರಡನೇ ಹಂತದ ಚಿತ್ರೀಕರಣವನ್ನು ಜುಲೈ ತಿಂಗಳಿನಲ್ಲಿ ಆರಂಭಿಸಲಾಗುತ್ತದೆ ಎಂದು ನಿರ್ದೇಶಕ ಚಿಂತನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT