ಸೆನ್ಸಾರ್ ಕೇಂದ್ರ ಮಂಡಳಿ ಅಧ್ಯಕ್ಷ ಪಹ್ಲಜ್ ನಿಹಲಾನಿ 
ಸಿನಿಮಾ ಸುದ್ದಿ

ಸೆನ್ಸಾರ್ ಮಂಡಲಿಯಲ್ಲಿ ಭ್ರಷ್ಟಾಚಾರ ಸೊನ್ನೆ: ಪಹ್ಲಜ್ ನಿಹಲಾನಿ

ಸೆನ್ಸಾರ್ ಮಂಡಲಿಯ ಆಡಳಿತದಲ್ಲಿ ಭ್ರಷ್ಟಾಚಾರ ಈಗ ಸೊನ್ನೆ ಎಂದಿರುವ ಸೆನ್ಸಾರ್ ಕೇಂದ್ರ ಮಂಡಳಿ ಅಧ್ಯಕ್ಷ ಪಹ್ಲಜ್ ನಿಹಲಾನಿ, ಭ್ರಷ್ಟಾಚಾರದ ಪ್ರಕರಣಗಳೆಲ್ಲವೂ ಅವರು ಅಧಿಕಾರ ಸ್ವೀಕರಿಸುವುದಕ್ಕೂ

ಮುಂಬೈ: ಸೆನ್ಸಾರ್ ಮಂಡಲಿಯ ಆಡಳಿತದಲ್ಲಿ ಭ್ರಷ್ಟಾಚಾರ ಈಗ ಸೊನ್ನೆ ಎಂದಿರುವ ಸೆನ್ಸಾರ್ ಕೇಂದ್ರ ಮಂಡಳಿ ಅಧ್ಯಕ್ಷ ಪಹ್ಲಜ್ ನಿಹಲಾನಿ, ಭ್ರಷ್ಟಾಚಾರದ ಪ್ರಕರಣಗಳೆಲ್ಲವೂ ಅವರು ಅಧಿಕಾರ ಸ್ವೀಕರಿಸುವುದಕ್ಕೂ ಹಿಂದಿನವು ಎಂದಿದ್ದಾರೆ.

"ವಿಳಂಬ ಮಾಡಿದ ಸಮಯದಲ್ಲಿ ಭ್ರಷ್ಟಾಚಾರ ನಡೆಯುತ್ತದೆ ಮತ್ತು ಇದು ಎಲ್ಲರಿಗೂ ತೊಂದರೆಯನ್ನುಂಟುಮಾಡುತ್ತದೆ. ನನ್ನ ತಿಳುವಳಿಕೆ ಮತ್ತು ನಾನು ಗಮನಿಸಿರುವ ಪ್ರಕಾರ ದೀಪಾವಳಿಯಲ್ಲಿ ಸಾಮಾನ್ಯವಾಗಿ ಬರುವ ಉಡುಗೊರೆಗಳನ್ನು ಕೂಡ ಅವರು ನಿರಾಕರಿಸಿದ್ದಾರೆ. ನನಗೆ ನಮ್ಮ ಸಹದ್ಯೋಗಿಗಳ ಮೇಲೆ ಹೆಮ್ಮೆಯಿದೆ. ಅವರು ಸವಾಲನ್ನು ಸ್ವೀಕರಿಸಿ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ.

"ಅವರು ಮೊದಲು ಸೋಮವಾರದಿಂದ ಶುಕ್ರವಾರದವರೆಗೆ ಕೆಲಸ ಮಾಡುತ್ತಿದ್ದರು, ಆದರೆ ಈಗ ಶನಿವಾರ ಮತ್ತು ಭಾನುವಾರಗಳಂದು ಕೂಡ ಕೆಲಸ ಮಾಡುತ್ತಾರೆ.. ಅವರು ನನಗೆ ಬೆಂಬಲ ನೀಡುತ್ತಿದ್ದಾರೆ ಮತ್ತು ಪ್ರಮಾಣ ಪತ್ರ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದುದರಿಂದ ಇಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲ, ಭ್ರಷ್ಟಾಚಾರ ಸೊನ್ನೆ" ಎಂದು ನೆನ್ನೆ ವರದಿಗಾರರಿಗೆ ನಿಹಲಾನಿ ಹೇಳಿದ್ದಾರೆ.

ಈ ಹಿಂದಿನ ಸಿ ಬಿ ಎಫ್ ಸಿ ಮಂಡಲಿಯ ಸಿ ಇ ಒ ರಾಕೇಶ್ ಕುಮಾರ್ ಅವರನ್ನು ಲಂಚ ತೆಗೆದುಕೊಂಡಿರುವ ಆರೋಪದ ಮೇಲೆ ಸಿಬಿಐ  ಬಂಧಿಸಿರುವುದರ ಬಗ್ಗೆ ಪ್ರಶ್ನಿಸಿದಾಗ ಆ ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ನಾಯಕತ್ವದಲ್ಲಿ ಪ್ರಮಾಣಪತ್ರ ಒದಗಿಸಲು ಯಾವುದೇ ವಿಳಂಬವೆಸಗುತ್ತಿಲ್ಲ ಎಂದಿರುವ ಅವರು ಮಂಡಲಿಗೆ ೨೧ ದಿನದ ಸಮಯಾವಕಾಶವಿದ್ದರೂ ೨-೩ ದಿನಗಳಲ್ಲಿ ಪ್ರಮಾಣ ಪತ್ರ ನೀಡುತ್ತಿದ್ದೇವೆ. ಅಂತರ್ಜಾಲ ಪ್ರಮಾಣಪತ್ರ ನಿಡುವ ಯೋಜನೆಯನ್ನು ಜಾರಿ ಮಾಡಲಿದ್ದೇವೆ ಎಂದಿದ್ದಾರೆ ಪಹ್ಲಜ್ ನಿಹಲಾನಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT