ಸೆನ್ಸಾರ್ ಕೇಂದ್ರ ಮಂಡಳಿ ಅಧ್ಯಕ್ಷ ಪಹ್ಲಜ್ ನಿಹಲಾನಿ 
ಸಿನಿಮಾ ಸುದ್ದಿ

ಸೆನ್ಸಾರ್ ಮಂಡಲಿಯಲ್ಲಿ ಭ್ರಷ್ಟಾಚಾರ ಸೊನ್ನೆ: ಪಹ್ಲಜ್ ನಿಹಲಾನಿ

ಸೆನ್ಸಾರ್ ಮಂಡಲಿಯ ಆಡಳಿತದಲ್ಲಿ ಭ್ರಷ್ಟಾಚಾರ ಈಗ ಸೊನ್ನೆ ಎಂದಿರುವ ಸೆನ್ಸಾರ್ ಕೇಂದ್ರ ಮಂಡಳಿ ಅಧ್ಯಕ್ಷ ಪಹ್ಲಜ್ ನಿಹಲಾನಿ, ಭ್ರಷ್ಟಾಚಾರದ ಪ್ರಕರಣಗಳೆಲ್ಲವೂ ಅವರು ಅಧಿಕಾರ ಸ್ವೀಕರಿಸುವುದಕ್ಕೂ

ಮುಂಬೈ: ಸೆನ್ಸಾರ್ ಮಂಡಲಿಯ ಆಡಳಿತದಲ್ಲಿ ಭ್ರಷ್ಟಾಚಾರ ಈಗ ಸೊನ್ನೆ ಎಂದಿರುವ ಸೆನ್ಸಾರ್ ಕೇಂದ್ರ ಮಂಡಳಿ ಅಧ್ಯಕ್ಷ ಪಹ್ಲಜ್ ನಿಹಲಾನಿ, ಭ್ರಷ್ಟಾಚಾರದ ಪ್ರಕರಣಗಳೆಲ್ಲವೂ ಅವರು ಅಧಿಕಾರ ಸ್ವೀಕರಿಸುವುದಕ್ಕೂ ಹಿಂದಿನವು ಎಂದಿದ್ದಾರೆ.

"ವಿಳಂಬ ಮಾಡಿದ ಸಮಯದಲ್ಲಿ ಭ್ರಷ್ಟಾಚಾರ ನಡೆಯುತ್ತದೆ ಮತ್ತು ಇದು ಎಲ್ಲರಿಗೂ ತೊಂದರೆಯನ್ನುಂಟುಮಾಡುತ್ತದೆ. ನನ್ನ ತಿಳುವಳಿಕೆ ಮತ್ತು ನಾನು ಗಮನಿಸಿರುವ ಪ್ರಕಾರ ದೀಪಾವಳಿಯಲ್ಲಿ ಸಾಮಾನ್ಯವಾಗಿ ಬರುವ ಉಡುಗೊರೆಗಳನ್ನು ಕೂಡ ಅವರು ನಿರಾಕರಿಸಿದ್ದಾರೆ. ನನಗೆ ನಮ್ಮ ಸಹದ್ಯೋಗಿಗಳ ಮೇಲೆ ಹೆಮ್ಮೆಯಿದೆ. ಅವರು ಸವಾಲನ್ನು ಸ್ವೀಕರಿಸಿ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ.

"ಅವರು ಮೊದಲು ಸೋಮವಾರದಿಂದ ಶುಕ್ರವಾರದವರೆಗೆ ಕೆಲಸ ಮಾಡುತ್ತಿದ್ದರು, ಆದರೆ ಈಗ ಶನಿವಾರ ಮತ್ತು ಭಾನುವಾರಗಳಂದು ಕೂಡ ಕೆಲಸ ಮಾಡುತ್ತಾರೆ.. ಅವರು ನನಗೆ ಬೆಂಬಲ ನೀಡುತ್ತಿದ್ದಾರೆ ಮತ್ತು ಪ್ರಮಾಣ ಪತ್ರ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದುದರಿಂದ ಇಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲ, ಭ್ರಷ್ಟಾಚಾರ ಸೊನ್ನೆ" ಎಂದು ನೆನ್ನೆ ವರದಿಗಾರರಿಗೆ ನಿಹಲಾನಿ ಹೇಳಿದ್ದಾರೆ.

ಈ ಹಿಂದಿನ ಸಿ ಬಿ ಎಫ್ ಸಿ ಮಂಡಲಿಯ ಸಿ ಇ ಒ ರಾಕೇಶ್ ಕುಮಾರ್ ಅವರನ್ನು ಲಂಚ ತೆಗೆದುಕೊಂಡಿರುವ ಆರೋಪದ ಮೇಲೆ ಸಿಬಿಐ  ಬಂಧಿಸಿರುವುದರ ಬಗ್ಗೆ ಪ್ರಶ್ನಿಸಿದಾಗ ಆ ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ನಾಯಕತ್ವದಲ್ಲಿ ಪ್ರಮಾಣಪತ್ರ ಒದಗಿಸಲು ಯಾವುದೇ ವಿಳಂಬವೆಸಗುತ್ತಿಲ್ಲ ಎಂದಿರುವ ಅವರು ಮಂಡಲಿಗೆ ೨೧ ದಿನದ ಸಮಯಾವಕಾಶವಿದ್ದರೂ ೨-೩ ದಿನಗಳಲ್ಲಿ ಪ್ರಮಾಣ ಪತ್ರ ನೀಡುತ್ತಿದ್ದೇವೆ. ಅಂತರ್ಜಾಲ ಪ್ರಮಾಣಪತ್ರ ನಿಡುವ ಯೋಜನೆಯನ್ನು ಜಾರಿ ಮಾಡಲಿದ್ದೇವೆ ಎಂದಿದ್ದಾರೆ ಪಹ್ಲಜ್ ನಿಹಲಾನಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT