ನಟ ಹಾಗೂ ಆಂಧ್ರಪ್ರದೇಶ ಟಿಡಿಪಿ ಶಾಸಕ ಬಾಲಕೃಷ್ಣ 
ಸಿನಿಮಾ ಸುದ್ದಿ

ಮಹಿಳೆಯರ ಕುರಿತು ಅಶ್ಲೀಲ ಹೇಳಿಕೆ: ವಿವಾದದಲ್ಲಿ ನಟ ಬಾಲಕೃಷ್ಣ

ಮಹಿಳಾ ದಿನಾಚರಣೆಯ ಬೆನ್ನಲ್ಲೇ ನಟ ಹಾಗೂ ಆಂಧ್ರಪ್ರದೇಶ ಟಿಡಿಪಿ ಶಾಸಕ ಬಾಲಕೃಷ್ಣ ಅವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಮಹಿಳೆಯರ ಕುರಿತು ಅಶ್ಲೀಲ ಹೇಳಿಕೆ ನೀಡಿದ್ದ ಬಾಲಕೃಷ್ಣ ವಿರುದ್ಧ ವಕೀಲ ರವಿಕುಮಾರ್ ಎಂಬುವವರು...

ಆಂಧ್ರಪ್ರದೇಶ: ಮಹಿಳಾ ದಿನಾಚರಣೆಯ ಬೆನ್ನಲ್ಲೇ ನಟ ಹಾಗೂ ಆಂಧ್ರಪ್ರದೇಶ ಟಿಡಿಪಿ ಶಾಸಕ ಬಾಲಕೃಷ್ಣ ಅವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಮಹಿಳೆಯರ ಕುರಿತು ಅಶ್ಲೀಲ ಹೇಳಿಕೆ ನೀಡಿದ್ದ ಬಾಲಕೃಷ್ಣ ವಿರುದ್ಧ ವಕೀಲ ರವಿಕುಮಾರ್ ಎಂಬುವವರು ಹೈದ್ರಾಬಾದ್'ನ ಸರೂರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದನ್ನು ದಾಖಲಿಸಿದ್ದಾರೆ.

ಕಳೆದೆರಡು ದಿನಗಳ ಹಿಂದೆ ಸಾವಿತ್ರಿ ಸಿನಿಮಾ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಸಿದ್ದ ಬಾಲಕೃಷ್ಣ ಅವರು ತಮ್ಮ ಅಭಿಮಾನಿಗಳ ಕುರಿತು ಮಾತನಾಡಿದ್ದರು. ಈ ವೇಳೆ ನನ್ನ ಅಭಿಮಾನಿಗಳಿಗೆ ನಾನು ಚಿತ್ರ ನಾಯಕಿಯರ ಹಿಂದೆ ಹೋಗುವುದನ್ನು ಇಷ್ಟಪಡುವುದಿಲ್ಲ. ಒಂದು ನಾಯಕಿಯರಿಗೆ ಕಿಸ್ ಮಾಡಬೇಕು. ಇಲ್ಲವೇ, ಅವರನ್ನು ಗರ್ಭವತಿ ಮಾಡಬೇಕು ಎಂದು ಹೇಳಿದ್ದರು. ಬಾಲಕೃಷ್ಣ ಅವರ ಈ ಹೇಳಿಕೆ ಕಾರ್ಯಕ್ರಮದ ವೇದಿಕೆಯಲ್ಲಿದ್ದ ಮಹಿಳೆಯರಿಗೆ ಮುಜುಗರವನ್ನುಂಟು ಮಾಡಿತ್ತು.

ಇದೀಗ ಬಾಲಕೃಷ್ಣ ಅವರ ಈ ಹೇಳಿಕೆ ಸಂಬಂಧ ಇಂದು ಪ್ರಕರಣ ದಾಖಲಾಗಿದ್ದು, ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಾಗಿರುವುದರಿಂದ ದೂರು ಮಹತ್ವವನ್ನು ಪಡೆದುಕೊಂಡಿದೆ.

ಬಾಲಕೃಷ್ಣ ಹೇಳಿಕೆ ವಿರುದ್ಧ ಕಿಡಿಕಾರಿರುವ ನಟಿ ಹಾಗೂ ವೈಎಸ್ಆರ್ ಕಾಂಗ್ರೆಸ್ ನಾಯಕಿ ರೋಜಾ ಅವರು, ಹಿರಿಯ ನಾಯಕರಾಗಿ ಇಂತಹವರೇ ಮಹಿಳೆಯರಿಗೆ ಗೌರವ ನೀಡಿದ್ದರೆ, ಇಂದು ದೇಶದಲ್ಲಿ ಮಹಿಳೆಯರ ಪರಿಸ್ಥಿತಿ ಹೇಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಬಾಲಕೃಷ್ಣ ಅವರು ಕೂಡಲೇ ತಮ್ಮ ಹೇಳಿಕೆ ಕುರಿತಂತೆ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತಂತೆ ಸ್ಪಷ್ಟನೆ ನೀಡಿರುವ ಬಾಲಕೃಷ್ಣ ಅವರು, ಅಭಿಮಾನಿಗಳ ನಿರೀಕ್ಷೆ ಹಾಗೂ ಅವರ ಆಲೋಚನೆಗಳ ಕುರಿತಂತೆ ಅಷ್ಟೇ ಮಾತನಾಡಿದ್ದೆ. ಅಷ್ಟೇ ಹೊರತು ಮಹಿಳೆಯರನ್ನು ಅವಮಾನಿಸಬೇಕೆಂಬ ಉದ್ದೇಶ ನನ್ನದಾಗಿರಲಿಲ್ಲ ಎಂದು ಹೇಳಿದ್ದಾರೆ.

ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದ್ದು, ಪ್ರಾಥಮಿಕ ಮಾಹಿತಿಗಳ ವರದಿಯನ್ನು ಸಲ್ಲಿಸುವುದಕ್ಕೂ ಮೊದಲೂ ಕಾನೂನು ನಿಬಂಧನೆಗಳನ್ನು ಪರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT