ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಠಾಣೆಗೆ ಹಾಜರಾಗಿ, ಇಲ್ಲ ಶಿಸ್ತು ಕ್ರಮ ಎದುರಿಸಿ: ನಟ ದರ್ಶನ್ ಗೆ ಪೊಲೀಸ್ ಎಚ್ಚರಿಕೆ

ಸ್ಯಾಂಡಲ್ ವುಡ್ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ನಡುವಿನ ದಾಂಪತ್ಯ ಕಲಹ ಸತತ 3ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟ ದರ್ಶನ್ ಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ನಡುವಿನ ದಾಂಪತ್ಯ ಕಲಹ ಸತತ 3ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟ  ದರ್ಶನ್ ಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ದೂರಿನ ಹಿನ್ನಲೆಯಲ್ಲಿ ನಟ ದರ್ಶನ್ ಗೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣೆಯಿಂದ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೂ, ನಟ  ದರ್ಶನ್ ಮಾತ್ರ ತಮ್ಮ ತಾಯಿಯ ಆರೋಗ್ಯ ಸರಿಇಲ್ಲ ಎಂದು ಹೇಳಿ ಮೈಸೂರಿಗೆ ತೆರಳಿದ್ದಾರೆ. ದರ್ಶನ್ ಮೈಸೂರಿಗೆ ತೆರಳಿ ಇಂದಿಗೆ ಎರಡು ದಿನಗಳು ಕಳೆದಿದ್ದರೂ ಈ ವರೆಗೂ ಬೆಂಗಳೂರಿಗೆ  ವಾಪಸಾಗಿಲ್ಲ. ಈ ಹಿಂದೆ ಪ್ರಕರಣ ಸಂಬಂಧ ದೂರು ದಾಖಲಾಗಿದ್ದಾಗ ಶುಕ್ರವಾರವೇ ವಿಚಾರಣೆಗೆ ಹಾಜಗಾರುವುದಾಗಿ ಹೇಳಿದ್ದ ದರ್ಶನ್ ಈ ವರೆಗೂ ಮಹಿಳಾ ಆಯೋಗದ ವಿಚಾರಣೆಗಾಗಲಿ  ಅಥವಾ ಪೊಲೀಸರ ವಿಚಾರಣೆಗಾಗಲಿ ಹಾಜರಾಗಿಲ್ಲ. ಹೀಗಾಗಿ ಪೊಲೀಸರು ನಟ ದರ್ಶನ್ ಗೆ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು  ತಿಳಿದುಬಂದಿದೆ.

ಏತನ್ಮಧ್ಯೆ ದರ್ಶನ್ ಕೌಟುಂಬಿಕ ಕಲಹವನ್ನು ಸರಿಪಡಿಸುವ ನಿಟ್ಟಿನಲ್ಲಿ ನಟ ಮತ್ತು ವಸತಿ ಸಚಿವ ಅಂಬರೀಶ್ ಸೇರಿದಂತೆ ಚಿತ್ರರಂಗದ ಗಣ್ಯರು ತೆರೆಮರೆಯಲ್ಲಿ ನಡೆಸುತ್ತಿರುವ ಪ್ರಯತ್ನಗಳು  ಮುಂದುವರೆದಿವೆ. ಅಂಬರೀಶ್ ನೇತೃತ್ವದಲ್ಲಿ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಅದರಿಂದ ಯಾವುದೇ ಪ್ರಯೋಜನಗಳು  ಆಗಿಲ್ಲ. ಹೀಗಿದ್ದೂ ಚಿತ್ರರಂಗದ ಹಿರಿಯರು ರಾಜಿ ಸಂಧಾನ ಪ್ರಕ್ರಿಯೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

"ಪ್ರಕರಣ ಸಂಬಂಧ ನಟ ದರ್ಶನ್ ಶುಕ್ರವಾರವೇ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಆದರೆ ಈ ವರೆಗೂ ಅವರು ವಿಚಾರಣೆಗೆ ಹಾಜರಾಗಿಲ್ಲ. ವಿಚಾರಣೆಗೆ ಹಾಜರಾಗುತ್ತೇನೆ ಅಥವಾ  ಬರುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿಲ್ಲ. ಹೀಗಾಗಿ ಅವರನ್ನು ನಮ್ಮ ಸಿಬ್ಬಂದಿ ನಿರಂತರ ಸಂಪರ್ಕಿಸುವ ಪ್ರಯತ್ನದಲ್ಲಿದ್ದಾರೆ. ಒಂದು ವೇಳೆ ದರ್ಶನ್ ವಿಚಾರಣೆಗೆ ಬರಲು ನಿರಾಕರಿಸಿದರೆ ಆಗ   ಅವರ ವಿರುದ್ಧ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕುಮಾರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT