ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಠಾಣೆಗೆ ಹಾಜರಾಗಿ, ಇಲ್ಲ ಶಿಸ್ತು ಕ್ರಮ ಎದುರಿಸಿ: ನಟ ದರ್ಶನ್ ಗೆ ಪೊಲೀಸ್ ಎಚ್ಚರಿಕೆ

ಸ್ಯಾಂಡಲ್ ವುಡ್ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ನಡುವಿನ ದಾಂಪತ್ಯ ಕಲಹ ಸತತ 3ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟ ದರ್ಶನ್ ಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ನಡುವಿನ ದಾಂಪತ್ಯ ಕಲಹ ಸತತ 3ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟ  ದರ್ಶನ್ ಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ದೂರಿನ ಹಿನ್ನಲೆಯಲ್ಲಿ ನಟ ದರ್ಶನ್ ಗೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣೆಯಿಂದ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೂ, ನಟ  ದರ್ಶನ್ ಮಾತ್ರ ತಮ್ಮ ತಾಯಿಯ ಆರೋಗ್ಯ ಸರಿಇಲ್ಲ ಎಂದು ಹೇಳಿ ಮೈಸೂರಿಗೆ ತೆರಳಿದ್ದಾರೆ. ದರ್ಶನ್ ಮೈಸೂರಿಗೆ ತೆರಳಿ ಇಂದಿಗೆ ಎರಡು ದಿನಗಳು ಕಳೆದಿದ್ದರೂ ಈ ವರೆಗೂ ಬೆಂಗಳೂರಿಗೆ  ವಾಪಸಾಗಿಲ್ಲ. ಈ ಹಿಂದೆ ಪ್ರಕರಣ ಸಂಬಂಧ ದೂರು ದಾಖಲಾಗಿದ್ದಾಗ ಶುಕ್ರವಾರವೇ ವಿಚಾರಣೆಗೆ ಹಾಜಗಾರುವುದಾಗಿ ಹೇಳಿದ್ದ ದರ್ಶನ್ ಈ ವರೆಗೂ ಮಹಿಳಾ ಆಯೋಗದ ವಿಚಾರಣೆಗಾಗಲಿ  ಅಥವಾ ಪೊಲೀಸರ ವಿಚಾರಣೆಗಾಗಲಿ ಹಾಜರಾಗಿಲ್ಲ. ಹೀಗಾಗಿ ಪೊಲೀಸರು ನಟ ದರ್ಶನ್ ಗೆ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು  ತಿಳಿದುಬಂದಿದೆ.

ಏತನ್ಮಧ್ಯೆ ದರ್ಶನ್ ಕೌಟುಂಬಿಕ ಕಲಹವನ್ನು ಸರಿಪಡಿಸುವ ನಿಟ್ಟಿನಲ್ಲಿ ನಟ ಮತ್ತು ವಸತಿ ಸಚಿವ ಅಂಬರೀಶ್ ಸೇರಿದಂತೆ ಚಿತ್ರರಂಗದ ಗಣ್ಯರು ತೆರೆಮರೆಯಲ್ಲಿ ನಡೆಸುತ್ತಿರುವ ಪ್ರಯತ್ನಗಳು  ಮುಂದುವರೆದಿವೆ. ಅಂಬರೀಶ್ ನೇತೃತ್ವದಲ್ಲಿ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಅದರಿಂದ ಯಾವುದೇ ಪ್ರಯೋಜನಗಳು  ಆಗಿಲ್ಲ. ಹೀಗಿದ್ದೂ ಚಿತ್ರರಂಗದ ಹಿರಿಯರು ರಾಜಿ ಸಂಧಾನ ಪ್ರಕ್ರಿಯೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

"ಪ್ರಕರಣ ಸಂಬಂಧ ನಟ ದರ್ಶನ್ ಶುಕ್ರವಾರವೇ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಆದರೆ ಈ ವರೆಗೂ ಅವರು ವಿಚಾರಣೆಗೆ ಹಾಜರಾಗಿಲ್ಲ. ವಿಚಾರಣೆಗೆ ಹಾಜರಾಗುತ್ತೇನೆ ಅಥವಾ  ಬರುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿಲ್ಲ. ಹೀಗಾಗಿ ಅವರನ್ನು ನಮ್ಮ ಸಿಬ್ಬಂದಿ ನಿರಂತರ ಸಂಪರ್ಕಿಸುವ ಪ್ರಯತ್ನದಲ್ಲಿದ್ದಾರೆ. ಒಂದು ವೇಳೆ ದರ್ಶನ್ ವಿಚಾರಣೆಗೆ ಬರಲು ನಿರಾಕರಿಸಿದರೆ ಆಗ   ಅವರ ವಿರುದ್ಧ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕುಮಾರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT