ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಆಡಿಯೋ ಟೇಪ್ ನಲ್ಲಿರುವ ಧ್ವನಿ ನನ್ನ ಪತಿಯದ್ದಲ್ಲ: ಪತ್ನಿ ವಿಜಯಲಕ್ಷ್ಮಿ

ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಕೌಟುಂಬಿಕ ಕಲಹಕ್ಕೆ ಹೊಸ ತಿರುವು ದೊರೆತಿದ್ದು, ಪತ್ನಿಯನ್ನು ದರ್ಶನ್ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದ್ದ ಆಡಿಯೋ ತುಣುಕಿನಲ್ಲಿರುವ ಧ್ವನಿ ದರ್ಶನ್ ದಲ್ಲ ಎಂದು ವಿಜಯಲಕ್ಷ್ಮಿ...

ಬೆಂಗಳೂರು: ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಕೌಟುಂಬಿಕ ಕಲಹಕ್ಕೆ ಹೊಸ ತಿರುವು ದೊರೆತಿದ್ದು, ಪತ್ನಿಯನ್ನು ದರ್ಶನ್ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದ್ದ ಆಡಿಯೋ  ತುಣುಕಿನಲ್ಲಿರುವ ಧ್ವನಿ ದರ್ಶನ್ ದಲ್ಲ ಎಂದು ಹೇಳುವ ಮೂಲಕ ಪತ್ನಿ ವಿಜಯಲಕ್ಷ್ಮಿ ಅವರ ಬೆನ್ನಿಗೆ ನಿಂತಿದ್ದಾರೆ.

ನಟ ದರ್ಶನ್‌ ಅವರ ಧ್ವನಿಯನ್ನೇ ಹೋಲುವ ಆಡಿಯೊ ತುಣುಕು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಆಡಿಯೊದಲ್ಲಿ ಅವಾಚ್ಯ ಶಬ್ದಗಳಿಂದ ವಿಜಯಲಕ್ಷ್ಮೀ ಅವರನ್ನು ನಿಂದಿಸಲಾಗಿದೆ. 50  ಸೆಕೆಂಡಿನ ಈ ಆಡಿಯೊ ತುಣುಕಿನಲ್ಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಕ್ಕೆ ತಮ್ಮ ಪತ್ನಿ ಮೊಬೈಲ್‌ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಇದೀಗ ಈ ಆಡಿಯೋ  ತುಣುಕು ವೈರಲ್ ಆಗಿದ್ದು, ಭಾರಿ ವಿವಾದವನ್ನು ಹುಟ್ಟುಹಾಕಿದೆ.

ಆದರೆ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿಜಯಲಕ್ಷ್ಮೀ ಅವರು, "ಆಡಿಯೊ ತುಣುಕು ನಕಲಿಯಾಗಿದ್ದು, ಆಡಿಯೊ ತುಣುಕಿನಲ್ಲಿರುವ ಧ್ವನಿ ತಮ್ಮ ಪತಿಯದಲ್ಲ. ನಮ್ಮ ಕೌಟುಂಬಿಕ  ಕಲಹವನ್ನು ಮೂರನೇ ವ್ಯಕ್ತಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಅವರಿಂದಲೇ ಈ ನಕಲಿ ಆಡಿಯೋ ತುಣುಕು ಸೃಷ್ಟಿಯಾಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಅಲ್ಲದೆ  ನಮ್ಮ ಕೌಟುಂಬಿಕ  ಸಮಸ್ಯೆ ಬಗ್ಗೆ ಮಾಧ್ಯಮಗಳಲ್ಲಿ ಮೇಲಿಂದ ಮೇಲೆ ನಾನಾ ವಿಷಯಗಳು ಪ್ರಸಾರವಾಗುತ್ತಿವೆ. ಈಗ ಆಡಿಯೊ ಬಿಡುಗಡೆಯಾಗಿದೆ. ಈ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ತುಂಬಾ  ಕಿರಿಕಿರಿಯಾಗುತ್ತಿದೆ ಎಂದೂ ವಿಜಯಲಕ್ಷ್ಮೀ ಬೇಸರ ವ್ಯಕ್ತಪಡಿಸಿದ್ದಾರೆ.

ಅಂತೆಯೇ ತಮ್ಮ ಪತಿ ಎಂದಿಗೂ ಇಂತಹ ಅಶ್ಲೀಲ ಪದಗಳನ್ನು ಬಳಕೆ ಮಾಡುವುದಿಲ್ಲಯ ಇದು ಯಾರೋ ಬೇಕೆಂದೇ ಹರಿಬಿಟ್ಟಿರುವ ಆಡಿಯೋ ಎಂದು ಅವರು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT