ಶ್ರೀಮುರುಳಿ 
ಸಿನಿಮಾ ಸುದ್ದಿ

ಶ್ರೀಮುರುಳಿ ಚಿತ್ರಕ್ಕೆ ಅಲೆಮಾರಿ ಸಂತು ನಿರ್ದೇಶನ

ಮುಂದಿನ ಚಿತ್ರದ ತಯಾರಿಯಲ್ಲಿರುವಾಗಲೇ ಶ್ರೀಮುರುಳಿ ಅಲೆಮಾರಿ ಖ್ಯಾತಿಯ ಸಂತೋಶ್ ಕುಮಾರ್( ಸಂತು) ನಿರ್ದೇಶನದಲ್ಲಿ ನಟನೆ ಮಾಡಲು ಆಸಕ್ತಿ ತೋರಿದ್ದಾರಂತೆ.

ಉಗ್ರಂ, ರಥಾವರ ಸಿನಿಮಾದ ಯಶಸ್ಸಿನಲ್ಲಿರುವ ನಟ ಶ್ರೀಮುರುಳಿ ಮತ್ತೊಂದು ಸಿನಿಮಾಗೆ ಸಿದ್ಧರಾಗುತ್ತಿದ್ದಾರೆ. ಜಯಣ್ಣ ನಿರ್ಮಾಣದಲ್ಲಿ ಸೆಟ್ಟೇರಲಿರುವ ಶ್ರೀ ಮುರುಳಿ ಅವರ ಮುಂದಿನ ಸಿನಿಮಾವನ್ನು ನರ್ತನ್ ನಿರ್ದೇಶನ ಮಾಡಲಿದ್ದಾರೆ. ಶ್ರೀ ಮುರುಳಿ ಅವರ ಚಿತ್ರವನ್ನು ನಿರ್ದೇಶಿಸುವ ಮೂಲಕ ನರ್ತನ್ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ.

ಮುಂದಿನ ಚಿತ್ರದ ತಯಾರಿಯಲ್ಲಿರುವಾಗಲೇ ಶ್ರೀಮುರುಳಿ ಅಲೆಮಾರಿ ಖ್ಯಾತಿಯ ಸಂತೋಶ್ ಕುಮಾರ್( ಸಂತು) ನಿರ್ದೇಶನದಲ್ಲಿ ನಟನೆ ಮಾಡಲು ಆಸಕ್ತಿ ತೋರಿದ್ದಾರಂತೆ. ಗಾಂಧಿನಗರದ ಸುದ್ದಿಯ ಪ್ರಕಾರ ಸಂತು ಬರೆದಿರುವ ಸ್ಕ್ರಿಪ್ಟ್ ನ್ನು ಶ್ರೀಮುರುಳಿ ಮೆಚ್ಚಿದ್ದು  ಈ ಚಿತ್ರವನ್ನು ಮಂಡ್ಯ ಟು ಮುಂಬೈ ಚಿತ್ರದ ನಿರ್ಮಾಪಕರು ನಿರ್ಮಾಣ ಮಾಡಲಿದ್ದಾರೆ.

ಚಿತ್ರ ನಿರ್ಮಾಣದ ಬಗ್ಗೆ ಮಾತುಕತೆ ಅಂತಿಮ ಹಂತದಲ್ಲಿದ್ದು, 90 ರ ನೈಜ ಘಟನೆ ಆಧಾರಿತ ಕಥೆಯಾಗಿರುವುದರಿಂದ ಶ್ರೀ ಮುರುಳಿ ಸಹ  ಸಂತೋಶ್ ಕುಮಾರ್ ನಿರ್ದೇಶನದಲ್ಲಿ ಅಭಿನಯಿಸಲು ಉತ್ಸುಕರಾಗಿದ್ದಾರೆಂದು ಹೇಳಲಾಗುತ್ತಿದೆ.

ಅಂತಿಮ ಹಂತದ ಮಾತುಕತೆ ಮುಕ್ತಾಯವಾದ ನಂತರ ಸಿನಿಮಾ ಚಿತ್ರೀಕರಣದ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ. ಸ್ಪೆಟೆಂಬರ್ ನಲ್ಲಿ ಚಿತ್ರೀಕರಣ ನಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT