'ತಿಥಿ' ಚಲನಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಕನಸು ನನಸಾಗಿದೆ; ಏಪ್ರಿಲ್ ಅಂತ್ಯಕ್ಕೆ ಸಿನೆಮಾ ರಾಷ್ಟ್ರದಾದ್ಯಂತ ಬಿಡುಗಡೆ: ತಿಥಿ ನಿರ್ದೇಶಕ

ತಮ್ಮ ಚೊಚ್ಚಲ ಚಿತ್ರ 'ತಿಥಿ' ಗೆ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ರಾಷ್ಟ್ರಪ್ರಶಸ್ತಿ ಗೆದ್ದಿರುವ ನಿರ್ದೇಶಕ ರಾಮ್ ರೆಡ್ಡಿ "ಕನಸು ನನಸಾಗಿದೆ" ಎಂದಿರುವುದಲ್ಲದೆ ಏಪ್ರಿಲ್ ಅಂತ್ಯಕ್ಕೆ ದೇಶದಾದ್ಯಂತ

ಚೆನ್ನೈ: ತಮ್ಮ ಚೊಚ್ಚಲ ಚಿತ್ರ 'ತಿಥಿ' ಗೆ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ರಾಷ್ಟ್ರಪ್ರಶಸ್ತಿ ಗೆದ್ದಿರುವ ನಿರ್ದೇಶಕ ರಾಮ್ ರೆಡ್ಡಿ "ಕನಸು ನನಸಾಗಿದೆ" ಎಂದಿರುವುದಲ್ಲದೆ ಏಪ್ರಿಲ್ ಅಂತ್ಯಕ್ಕೆ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಸಿನೆಮಾ ಬಿಡುಗಡೆಯಾಗಲಿದೆ ಎಂದಿದ್ದಾರೆ.

"ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ ಮೇಲೆ, ಈಗ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವುದು ಕನಸು ನನಸಾದಂತೆ" ಎಂದಿದ್ದಾರೆ ನಿರ್ದೇಶಕ ರಾಮ್

'ತಿಥಿ' ಲೊಕಾರ್ನೊ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಸಿನೆಮಾ ಪ್ರಶಸ್ತಿ ಗೆದ್ದಿತ್ತು. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಪ್ರಶಸ್ತಿ ಗಳಿಸಿತ್ತು.

"ಏಪ್ರಿಲ್ ಅಂತ್ಯಕ್ಕೆ ಅಥವಾ ಮೇ ಮೊದಲ ವಾರದಲ್ಲಿ ಸಿನೆಮಾ ಬಿಡುಗಡೆಯಾಗಲಿದ್ದು, ರಾಣಾ ದಗ್ಗುಬಟ್ಟಿ ಅಂತಹವರ ಬೆಂಬಲದೊಂದಿಗೆ ಕರ್ನಾಟಕ ಮತ್ತು ರಾಷ್ಟ್ರದಾದ್ಯಂತ ಹೆಚ್ಚೆಚ್ಚು ಪ್ರೇಕ್ಷಕರನ್ನು 'ತಿಥಿ' ಸಿನೆಮಾ ಸೆಳೆಯಲಿದೆ ಎಂದು ನಂಬಿದ್ದೇನೆ" ಎನ್ನುತ್ತಾರೆ ರಾಮ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT