ನಟಿ ಸಿಂಧು ಲೋಕನಾಥ್ 
ಸಿನಿಮಾ ಸುದ್ದಿ

ಮಲಯಾಳಂ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸಿಂಧು ಲೋಕನಾಥ್

ಕನ್ನಡ ಪ್ರೇಕ್ಷಕರ ಮನಗೆದ್ದಿರುವ ನಟಿ ಸಿಂಧು ಲೋಕನಾಥ್, ಅದನ್ನು ಮಲೆಯಾಳಂ ಚಿತ್ರರಂಗದಲ್ಲೂ ಮರುಕಳಿಸಲು 'ಥೆನೀಚ' ಸಿನೆಮಾ ಮೂಲಕ ನೆರೆಯ ಚಿತ್ರರಂಗಕ್ಕೂ

ಬೆಂಗಳೂರು: ಕನ್ನಡ ಪ್ರೇಕ್ಷಕರ ಮನಗೆದ್ದಿರುವ ನಟಿ ಸಿಂಧು ಲೋಕನಾಥ್, ಅದನ್ನು ಮಲೆಯಾಳಂ ಚಿತ್ರರಂಗದಲ್ಲೂ ಮರುಕಳಿಸಲು 'ಥೆನೀಚ' ಸಿನೆಮಾ ಮೂಲಕ ನೆರೆಯ ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದ್ದಾರೆ.

ಇದು ತೆಲುಗು ಮತ್ತು ತಮಿಳಿನಲ್ಲೂ ಸಿದ್ಧವಾಗುತ್ತಿದ್ದು, ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲೂ ನಟಿಸಿರುವ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಲಿದ್ದಾರೆ.

ಅವಕಾಶ ಹುಡಿಕಿ ಬಂದಾಗ ಒಪ್ಪಿಕೊಳ್ಳಲು ಯೋಚಿಸಲೇ ಇಲ್ಲ ಎನ್ನುವ ನಟಿ "ಮಲಯಾಳಂ ಚಿತ್ರರಂಗದಲ್ಲಿ ಬರುವ ಸಿನೆಮಾಗಳ ಬಗ್ಗೆ ನನಗೆ ತಿಳಿದಿದ್ದು, ಇದು ನನ್ನ ಅದೃಷ್ಟ ಎನಿಸಿತು. ಕಥೆ ಕೇಳಿದಮೇಲೆ ನೆರೆಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಒಳ್ಳೆಯ ಸಿನೆಮಾ ಎಂದೆನಿಸಿತು ಆದುದರಿಂದ ಒಪ್ಪಿಕೊಂಡೆ" ಎನ್ನುತ್ತಾರೆ ಸಿಂಧು.

ದಿನೇಶ್ ನಾಚಪ್ಪ ಈ ಸಿನೆಮಾವನ್ನು ನಿರ್ಮಿಸುತ್ತಿದ್ದು, ಸುಮಾರು 20 ಸಿನೆಮಾಗಳಲ್ಲಿ ಸಹ ನಿರ್ದೇಶಕನಾಗಿ ದುಡಿದಿರುವ ಮೋತಿ ಕೈಕೇರನ್ ಚೊಚ್ಚಲ ಬಾರಿಗೆ ಪೂರ್ಣಪ್ರಮಾಣದ ನಿರ್ದೇಶಕರಾಗಲಿದ್ದಾರೆ.

ನಟಿ ಈಗಾಗಲೇ ಕೊಡಗಿನಲ್ಲಿ ಒಂದು ವಾರದ ಚಿತ್ರೀಕರಣ ಮುಗಿಸಿದ್ದಾರೆ. "ಮುಂದಿನ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಏಪ್ರಿಲ್ ಮೊದಲ ವಾರ ಪ್ರಾರಂಭವಾಗಲಿದೆ" ಎಂದು ವಿವರಿಸುತ್ತಾರೆ.

ಸಿಂಧು ಪತ್ರಕರ್ತೆಯ ಪಾತ್ರ ನಿರ್ವಹಿಸಲಿದ್ದಾರಂತೆ. ಈ ಹಿಂದೆ ಮಲಯಾಳಂ ನಿಂದ ಅವಕಾಶಗಳು ಬಂದಿದ್ದರೂ ಭಾಷೆ ಗೊತ್ತಿಲ್ಲದಿದ್ದರಿಂದ ಹಿಂದೆಸರಿದಿದ್ದರಂತೆ. "ನನಗೆ ಈ ಹೊಸ ಭಾಷೆ ಮಾತನಾಡಲು ಅಥವಾ ಅರ್ಥ ಮಾಡಿಕೊಳ್ಳಲು ಯಾವಾಗಲು ಕಷ್ಟವಾಯಿತು. ಈ ಸಿನೆಮಾಗಾಗಿ ಕೇಳಿದಾಗಲೂ ನನಗೆ ಭಾಷೆ ಗೊತ್ತಿಲ್ಲವಾದ್ದರಿಂದ ಭಾವನೆಗಳನ್ನು ಸರಿಯಾಗಿ ವ್ಯಕ್ತಪಡಿಸಲು ಸಾಧ್ಯವೇ ಎಂಬ ಭಯ ಇನ್ನೂ ಇತ್ತು. ಆದರೆ ಸ್ಕ್ರಿಪ್ಟ್ ನೋಡಿದ ಮೇಲೆ ಅವಕಾಶ ಕಳೆದುಕೊಳ್ಳಲು ಮನಸ್ಸಾಗಲಿಲ್ಲ. ನಾಯಕ ನಟಿ ಪ್ರಧಾನಿ ಚಿತ್ರ ಇದು" ಎಂದು ವಿವರಿಸುತ್ತಾರೆ ಸಿಂಧು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT