ನಟಿ ಸಿಂಧು ಲೋಕನಾಥ್ 
ಸಿನಿಮಾ ಸುದ್ದಿ

ಮಲಯಾಳಂ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸಿಂಧು ಲೋಕನಾಥ್

ಕನ್ನಡ ಪ್ರೇಕ್ಷಕರ ಮನಗೆದ್ದಿರುವ ನಟಿ ಸಿಂಧು ಲೋಕನಾಥ್, ಅದನ್ನು ಮಲೆಯಾಳಂ ಚಿತ್ರರಂಗದಲ್ಲೂ ಮರುಕಳಿಸಲು 'ಥೆನೀಚ' ಸಿನೆಮಾ ಮೂಲಕ ನೆರೆಯ ಚಿತ್ರರಂಗಕ್ಕೂ

ಬೆಂಗಳೂರು: ಕನ್ನಡ ಪ್ರೇಕ್ಷಕರ ಮನಗೆದ್ದಿರುವ ನಟಿ ಸಿಂಧು ಲೋಕನಾಥ್, ಅದನ್ನು ಮಲೆಯಾಳಂ ಚಿತ್ರರಂಗದಲ್ಲೂ ಮರುಕಳಿಸಲು 'ಥೆನೀಚ' ಸಿನೆಮಾ ಮೂಲಕ ನೆರೆಯ ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದ್ದಾರೆ.

ಇದು ತೆಲುಗು ಮತ್ತು ತಮಿಳಿನಲ್ಲೂ ಸಿದ್ಧವಾಗುತ್ತಿದ್ದು, ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲೂ ನಟಿಸಿರುವ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಲಿದ್ದಾರೆ.

ಅವಕಾಶ ಹುಡಿಕಿ ಬಂದಾಗ ಒಪ್ಪಿಕೊಳ್ಳಲು ಯೋಚಿಸಲೇ ಇಲ್ಲ ಎನ್ನುವ ನಟಿ "ಮಲಯಾಳಂ ಚಿತ್ರರಂಗದಲ್ಲಿ ಬರುವ ಸಿನೆಮಾಗಳ ಬಗ್ಗೆ ನನಗೆ ತಿಳಿದಿದ್ದು, ಇದು ನನ್ನ ಅದೃಷ್ಟ ಎನಿಸಿತು. ಕಥೆ ಕೇಳಿದಮೇಲೆ ನೆರೆಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಒಳ್ಳೆಯ ಸಿನೆಮಾ ಎಂದೆನಿಸಿತು ಆದುದರಿಂದ ಒಪ್ಪಿಕೊಂಡೆ" ಎನ್ನುತ್ತಾರೆ ಸಿಂಧು.

ದಿನೇಶ್ ನಾಚಪ್ಪ ಈ ಸಿನೆಮಾವನ್ನು ನಿರ್ಮಿಸುತ್ತಿದ್ದು, ಸುಮಾರು 20 ಸಿನೆಮಾಗಳಲ್ಲಿ ಸಹ ನಿರ್ದೇಶಕನಾಗಿ ದುಡಿದಿರುವ ಮೋತಿ ಕೈಕೇರನ್ ಚೊಚ್ಚಲ ಬಾರಿಗೆ ಪೂರ್ಣಪ್ರಮಾಣದ ನಿರ್ದೇಶಕರಾಗಲಿದ್ದಾರೆ.

ನಟಿ ಈಗಾಗಲೇ ಕೊಡಗಿನಲ್ಲಿ ಒಂದು ವಾರದ ಚಿತ್ರೀಕರಣ ಮುಗಿಸಿದ್ದಾರೆ. "ಮುಂದಿನ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಏಪ್ರಿಲ್ ಮೊದಲ ವಾರ ಪ್ರಾರಂಭವಾಗಲಿದೆ" ಎಂದು ವಿವರಿಸುತ್ತಾರೆ.

ಸಿಂಧು ಪತ್ರಕರ್ತೆಯ ಪಾತ್ರ ನಿರ್ವಹಿಸಲಿದ್ದಾರಂತೆ. ಈ ಹಿಂದೆ ಮಲಯಾಳಂ ನಿಂದ ಅವಕಾಶಗಳು ಬಂದಿದ್ದರೂ ಭಾಷೆ ಗೊತ್ತಿಲ್ಲದಿದ್ದರಿಂದ ಹಿಂದೆಸರಿದಿದ್ದರಂತೆ. "ನನಗೆ ಈ ಹೊಸ ಭಾಷೆ ಮಾತನಾಡಲು ಅಥವಾ ಅರ್ಥ ಮಾಡಿಕೊಳ್ಳಲು ಯಾವಾಗಲು ಕಷ್ಟವಾಯಿತು. ಈ ಸಿನೆಮಾಗಾಗಿ ಕೇಳಿದಾಗಲೂ ನನಗೆ ಭಾಷೆ ಗೊತ್ತಿಲ್ಲವಾದ್ದರಿಂದ ಭಾವನೆಗಳನ್ನು ಸರಿಯಾಗಿ ವ್ಯಕ್ತಪಡಿಸಲು ಸಾಧ್ಯವೇ ಎಂಬ ಭಯ ಇನ್ನೂ ಇತ್ತು. ಆದರೆ ಸ್ಕ್ರಿಪ್ಟ್ ನೋಡಿದ ಮೇಲೆ ಅವಕಾಶ ಕಳೆದುಕೊಳ್ಳಲು ಮನಸ್ಸಾಗಲಿಲ್ಲ. ನಾಯಕ ನಟಿ ಪ್ರಧಾನಿ ಚಿತ್ರ ಇದು" ಎಂದು ವಿವರಿಸುತ್ತಾರೆ ಸಿಂಧು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT