ಪ್ರತ್ಯೂಷಾ ಬ್ಯಾನರ್ಜಿ ಮತ್ತು ರಾಹುಲ್ ರಾಜ್ ಸಿಂಗ್ 
ಸಿನಿಮಾ ಸುದ್ದಿ

ನಾನು ಯಾವುದೇ ತಪ್ಪು ಮಾಡಿಲ್ಲ, ಆಕೆಯನ್ನು ತುಂಬಾ ಪ್ರೀತಿಸುತ್ತಿದ್ದೆ: ರಾಹುಲ್ ರಾಜ್ ಸಿಂಗ್

ನಾನು ಯಾವುದೇ ತಪ್ಪು ಮಾಡಿಲ್ಲ, ಗೆಳತಿಯ ಆತ್ಮಹತ್ಯೆ ಪ್ರಕರಣದಲ್ಲಿ ನಾನೊಬ್ಬ ಮುಗ್ಥ ಎಂದು ರಾಹುಲ್ ರಾಜ್ ಸಿಂಗ್ ಹೇಳಿದ್ದಾರೆ. ...

ಮುಂಬಯಿ:  ನಾನು ಯಾವುದೇ ತಪ್ಪು ಮಾಡಿಲ್ಲ, ಗೆಳತಿಯ ಆತ್ಮಹತ್ಯೆ ಪ್ರಕರಣದಲ್ಲಿ ನಾನೊಬ್ಬ ಮುಗ್ಥ ಎಂದು ರಾಹುಲ್ ರಾಜ್ ಸಿಂಗ್ ಹೇಳಿದ್ದಾರೆ.

ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿರುವ ರಾಹುಲ್ ರಾಜ್ ಸಿಂಗ್, ಶೀಘ್ರವೇ ಸತ್ಯ ಹೊರಬೀಳಲಿದೆ ಅದಕ್ಕಾಗಿ ನಾನು ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ, ಆಕೆಯನ್ನು ತುಂಬಾ ಪ್ರೀತಿಸುತ್ತಿದ್ದೆ, ಆಕೆಯ ನೆನಪುಗಳೊಂದಿಗೆ ನಾನು ಬದುಕುತ್ತೇನೆ ಎಂದು ರಾಹುಲ್ ತಿಳಿಸಿದ್ದಾನೆ.

ಸತ್ಯ ಹೊರಬಂದ ನಂತರ ನಾನು ಮಾತನಾಡುತ್ತೇನೆ, ನನ್ನನ್ನು ನಾನು ಸಮರ್ಥಿಸಿಕೊಂಡು ನಾನು ಸಾಧಿಸುವುದು ಏನೂ ಇಲ್ಲ ಎಂದು ನೊಂದು ನುಡಿದಿದ್ದಾನೆ.

ಪ್ರತ್ಯೂಷಾ ಬದುಕಿಲ್ಲ ಎಂಬುದನ್ನು ನನಗೆ ಒಪ್ಪಿಕೊಳ್ಳಲಾಗುತ್ತಿಲ್ಲ. ನಾನು ನನ್ನ ಮಗುವನ್ನು ಕಳೆದುಕೊಂಡಿದ್ದೇನೆ. ಆಕೆ ನನ್ನ ಬದುಕಾಗಿದ್ದಳು. ನನಗೆ ನ್ಯಾಯಬೇಕು, ಒಂದಲ್ಲ ಒಂದು ದಿನ ಸತ್ಯ ಹೊರ ಪ್ರಪಂಚಕ್ಕೆ ತಿಳಿಯುತ್ತದೆ ಎಂದು ಹೇಳಿದ್ದಾನೆ.

ಈ ಪ್ರಕರಣದಲ್ಲಿ ನಾನು ಮುಗ್ಧ ಎಂದು ತೋರಿಸುತ್ತೇನೆ ಎಂಬ ಆತ್ಮ ವಿಶ್ವಾಸವಿದೆ ಎಂದು ಹೇಳಿರುವ ರಾಹುಲ್ ಸತ್ಯ ಹೊರಬರಲು ಕೆಲ ಸಮಯ ಕಾಯಬೇಕಾಗುತ್ತದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT