ಗೋಧಿ ಬಣ್ಣ ಸಾಧಾರಣ ಮೈಕಟ್ಟು ಭಿತ್ತಿಚಿತ್ರ 
ಸಿನಿಮಾ ಸುದ್ದಿ

ಜಿ ಬಿ ಎಸ್ ಎಂ: ಕಾಣೆಯಾದವರ ಬಗ್ಗೆ ಪ್ರಕಟನೆಯಷ್ಟೇ ಅಲ್ಲ; ಕ್ರೈಮ್ ಕೂಡ ಇದೆ

ನಿರ್ದೇಶಕ ಹೇಮಂತ್ ಎಂ ರಾವ್ ಅವರ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನೆಮಾಗೆ ಸೆನ್ಸಾರ್ ಮಂಡಲಿ 'ಯು/ಎ' ಪ್ರಮಾಣ ಪತ್ರ ನೀಡಿ ಬಿಡುಗಡೆಗೆ ಹಾದಿ ಸುಗಮಗೊಳಿಸಿದೆ.

ಬೆಂಗಳೂರು: ನಿರ್ದೇಶಕ ಹೇಮಂತ್ ಎಂ ರಾವ್ ಅವರ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನೆಮಾಗೆ ಸೆನ್ಸಾರ್ ಮಂಡಲಿ 'ಯು/ಎ' ಪ್ರಮಾಣ ಪತ್ರ ನೀಡಿ ಬಿಡುಗಡೆಗೆ ಹಾದಿ ಸುಗಮಗೊಳಿಸಿದೆ. ಇದು ಕೇವಲ ಕಾಣೆಯಾದವರ ಬಗೆಗಿನ ಸಿನೆಮಾ ಎಂದು ತಿಳಿದುಕೊಂಡಿದ್ದವರಿಗೆ ಈ ಪ್ರಮಾಣಪತ್ರ ತುಸು ಗೊಂದಲ ಮೂಡಿಸಿದ್ದು ನಿಜ.

ಇದರ ಬಗ್ಗೆ ವಿವರಿಸುವ ನಿರ್ದೇಶಕ ಹೇಮಂತ್ "ಈ ಸಿನೆಮಾದಲ್ಲಿ ಐದು ಕೊಲೆಗಳಾಗುತ್ತವೆ. ಇದು ಕಾಣೆಯಾದವರ ಬಗೆಗಿನ ಕಥೆಯಾದರೂ, ಪಯಣ ಅಷ್ಟು ಸುಲಭವಾದದ್ದಲ್ಲ ಏಕೆಂದರೆ ಇದಕ್ಕೆ ಕ್ರೈಂ ಕೋನವು ಇದೆ" ಎನ್ನುತ್ತಾರೆ.

ಇದೇ ತಿಂಗಳು ೨೭ರಂದು ಬಿಡುಗಡೆಯಾಗಲಿರುವ ಈ ಸಿನೆಮಾಗೆ ಮೊದಲ ಪ್ರೇಕ್ಷಕರಾಗಿದ್ದ ಸೆನ್ಸಾರ್ ಮಂಡಲಿಯ ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿರುವುದಕ್ಕೆ ಸಂತಸ ವ್ಯಕ್ತಪಡಿಸುವ ಹೇಮಂತ್ "ಅವರಿಗೆ ಸಿನೆಮಾ ಇಷ್ಟವಾಯಿತು. ಅನಂತನಾಗ್ ಅವರ ನಟನೆಗಂತೂ ಮಾರುಹೋದರು" ಎನ್ನುತ್ತಾರೆ.

ಪುಷ್ಕರ್ ಫಿಲ್ಮ್ಸ್ ಬ್ಯಾನರ್ ಅಡಿ ನಿರ್ಮಿಸಲಾಗಿರುವ ಈ ಸಿನೆಮಾದಲ್ಲಿ ಅನಂತ ನಾಗ್ ಅಲ್ಲದೆ, ರಕ್ಷಿತ್ ಶೆಟ್ಟಿ, ಶೃತಿ ಹರಿಹರನ್ ಮತ್ತು ಅಚ್ಯುತ್ ಕುಮಾರ್ ಕೂಡ ನಟಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT