'ಪುಷ್ಪಕ ವಿಮಾನ'ದ ಸ್ಟಿಲ್ 
ಸಿನಿಮಾ ಸುದ್ದಿ

ಚಿತ್ರೀಕರಣ ಮುಕ್ತಾಯದತ್ತ ದಾಪುಗಾಲು ಹಾಕಿದ 'ಪುಷ್ಪಕ ವಿಮಾನ'

ರಮೇಶ್ ಅಭಿನಯದ 'ಪುಷ್ಪಕ ವಿಮಾನ' ಸಿನೆಮಾದ ನಿರ್ದೇಶಕ ಎಸ್ ರವೀಂದ್ರನಾಥ್ ಕೊನೆಯ ಹಂತದ ಚಿತ್ರೀಕರಣ ನಡೆಸಿದ್ದಾರೆ. ಇದಕ್ಕಾಗಿ ಮಂಗಳೂರಿಗೆ ತೆರಳಲಿರುವ ಚಿತ್ರತಂಡ ರಮೇಶ್ ಅರವಿಂದ್

ಬೆಂಗಳೂರು: ರಮೇಶ್ ಅಭಿನಯದ 'ಪುಷ್ಪಕ ವಿಮಾನ' ಸಿನೆಮಾದ ನಿರ್ದೇಶಕ ಎಸ್ ರವೀಂದ್ರನಾಥ್ ಕೊನೆಯ ಹಂತದ ಚಿತ್ರೀಕರಣ ನಡೆಸಿದ್ದಾರೆ. ಇದಕ್ಕಾಗಿ ಮಂಗಳೂರಿಗೆ ತೆರಳಲಿರುವ ಚಿತ್ರತಂಡ ರಮೇಶ್ ಅರವಿಂದ್ ಮತ್ತು ಅವರ ಪುತ್ರಿಯ ಪಾತ್ರ ವಹಿಸಿರುವ ರಚಿತಾ ರಾಮ್ ನಡುವೆ ಭಾವನಾತ್ಮಕ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಸಲಿದೆಯಂತೆ. ಇದರ ನಂತರ ಒಂದು ಹಾಡಿನ ಚಿತ್ರೀಕರಣ ಬಾಕಿಯಿದೆಯಂತೆ. "ನಾವು ಚಿತ್ರೀಕರಣದ ಮುಕ್ತಾಯದ ಹಂತಕ್ಕೆ ಬಂದಿದ್ದೇವೆ" ಎನ್ನುತ್ತಾರೆ ಸಿನೆಮಾದ ನಿರ್ಮಾಪಕರಲ್ಲಿ ಒಬ್ಬರಾದ ವಿಖ್ಯಾತ್.

ಟ್ರೇಲರ್ ಬಿಡುಗಡೆಯ ನಂತರ ನಿರೀಕ್ಷೆಗಳ ಮಹಾಪೂರವನ್ನೇ ಸೃಷ್ಟಿಸಿತ್ತು 'ಪುಷ್ಪಕ ವಿಮಾನ'. ರಮೇಶ್ ಅರವಿಂದ್ ಎಲ್ಲರಿಗೂ ಕಣ್ಣೀರು ತರಿಸುವಲ್ಲಿ ಸಫಲರಾಗಿದ್ದಾರೆ ಎನ್ನುವ ವಿಖ್ಯಾತ್ "ಸೆಟ್ ನಲ್ಲೇ ಕಣ್ಣುಗಳು ತೇವವಾಗುತ್ತಿದ್ದವು. ರಮೇಶ್ ಜೊತೆಗಿನ ಚಿತ್ರೀಕರಣದ ವೇಳೆಯಲ್ಲಿ ರಚಿತಾ ರಾಮ್ ಅವರೇ ಭಾವನಾತ್ಮಕವಾಗಿ ಕಂಡುಬಂದರು. ಒಂದು ದೃಶ್ಯದ ಚಿತ್ರೀಕರಣದ ನಂತರ ಫೋನ್ ಹಿಡಿದು ಹೊರನಡೆದ ರಚಿತಾ ತಮ್ಮ ತಂದೆಯ ಜೊತೆ ಮಾತನಾಡಿದರು. ರಮೇಶ್ ಇರುವ ಪ್ರತಿ ದೃಶ್ಯದಲ್ಲು ಇದೇ ಅನುಭವವಾಗುತ್ತಿದೆ. ಇದು ಉತ್ಪ್ರೇಕ್ಷೆಯಲ್ಲ. ನಟನ ೧೦೦ನೆ ಸಿನೆಮಾ ಇದು ಖಂಡಿತಾ ಮೈಲಿಗಲ್ಲಾಗುತ್ತದೆ" ಎನ್ನುತ್ತಾರೆ.

ವಿಖ್ಯಾತ್ ಪಿಕ್ಚರ್ಸ್ ಮತ್ತು ಒಡೆಯರ್ ಫ್ಯಾಕ್ಟರಿ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಬಾಲನಟಿ ಯುವಿನಾ ಪಾರ್ಥವಿ ನಟಿಸಿದ್ದಾರೆ. ಜುಲೈ ನಲ್ಲಿ ಸಿನೆಮಾ ಬಿಡುಗಡೆ ಮಾಡುವ ಭರವಸೆ ಹೊಂದಿದೆ ಚಿತ್ರತಂಡ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT