'ನಟರಾಜ ಸರ್ವಿಸ್' ನಲ್ಲಿ ಶರಣ್ ಮತ್ತು ಮಯೂರಿ 
ಸಿನಿಮಾ ಸುದ್ದಿ

'ನಟರಾಜ ಸರ್ವಿಸ್' ತಂಡ ಚಿತ್ರೀಕರಣದ ವೇಳೆ ನಡೆದದ್ದು ೧೨೫ ಕಿಮೀ!

ಹೆಸರಿಗೆ ತಕ್ಕಂತೆ ಪವನ್ ಒಡೆಯರ್ ನಿರ್ದೇಶನದ 'ನಟರಾಜ ಸರ್ವಿಸ್' ತಂಡ ಚಿತ್ರದ ಪ್ರಮುಖ ಪಾತ್ರಧಾರಿಗಳಾದ ಶರಣ್ ಮತ್ತು ಮಯೂರಿ ಜೊತೆಗೆ, ಯೆಲ್ಲಾಪುರ ಸುತ್ತಮುತ್ತ ನಡೆದ

ಬೆಂಗಳೂರು: ಹೆಸರಿಗೆ ತಕ್ಕಂತೆ ಪವನ್ ಒಡೆಯರ್ ನಿರ್ದೇಶನದ 'ನಟರಾಜ ಸರ್ವಿಸ್' ತಂಡ ಚಿತ್ರದ ಪ್ರಮುಖ ಪಾತ್ರಧಾರಿಗಳಾದ ಶರಣ್ ಮತ್ತು ಮಯೂರಿ ಜೊತೆಗೆ, ಯೆಲ್ಲಾಪುರ ಸುತ್ತಮುತ್ತ ನಡೆದ ಚಿತ್ರೀಕರಣದ ವೇಳೆಯಲ್ಲಿ ೧೨೫ ಕಿಮೀ ದೂರ ನಡೆದೇ ಕ್ರಮಿಸಿದ್ದಾರಂತೆ!

"ಆಡುಭಾಷೆಯಲ್ಲಿ ನಟರಾಜ ಸರ್ವಿಸ್ ಎಂದರೆ ನಡೆಯುವುದು ಎಂದರ್ಥ. ಚಿತ್ರೀಕರಣದ ವೇಳೆಯಲ್ಲಿ ನಾವೂ ನಟರಾಜ ಸರ್ವಿಸ್ ಗೆ ಮೊರೆ ಹೋಗಬೇಕಾಯಿತು" ಎನ್ನುವ ನಿರ್ದೇಶಕ ೨೦ ದಿನಗಳಲ್ಲಿ ೧೨೫ ಕಿಲೋ ಮೀಟರ್ ದೂರವನ್ನು ನಡೆದಿರುವುದಾಗಿ ತಿಳಿಸುತ್ತಾರೆ. "ಈ ಪ್ರದೇಶಗಳಲ್ಲಿ ಪ್ರಯಾಣ ವ್ಯವಸ್ಥೆಗೆ ವಾಹನಗಳು ಸಿಗುವುದು ಕಷ್ಟವಾಗಿರುವುದರಿಂದ ಬೇರೆ ಬೇರೆ ಜಾಗಗಳಿಗೆ ನಡೆದೇ ಹೋಗಬೇಕಾಯಿತು" ಎನ್ನುತ್ತಾರೆ ಪವನ್.

ಈಗ ಮಾತುಕತೆಯ ಚಿತ್ರೀಕರಣ ಸಂಪೂರ್ಣಗೊಂಡಿದ್ದು, ಹಾಡುಗಳ ಚಿತ್ರೀಕರಣ ಮತ್ತು ಡಬ್ಬಿಂಗ್ ಗೆ ಚಿತ್ರತಂಡ ಅಣಿಯಾಗುತ್ತಿದೆ. ಇವೆಲ್ಲವೂ ಬೆಂಗಳೂರಿನಲ್ಲಿಯೇ ಜರುಗಲಿದೆಯಂತೆ.

'ಜೆಸ್ಸಿ' ನಂತರ ಪವನ್ ಒಡೆಯರ್ ಈ ಸಿನೆಮಾ ನಿರ್ದೇಶಿಸುತ್ತಿದ್ದು ಇದು ಹಾಸ್ಯಚಿತ್ರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT