ಪ್ರತ್ಯೂಷಾ ಬ್ಯಾನರ್ಜಿ ಮತ್ತು ರಾಹುಲ್ ರಾಜ್ ಸಿಂಗ್ 
ಸಿನಿಮಾ ಸುದ್ದಿ

ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ: ವೇಶ್ಯಾವಾಟಿಕೆಗೆ ಒತ್ತಾಯಿಸಿದ್ದ ರಾಹುಲ್ ರಾಜ್ ಸಿಂಗ್?

ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ....

ಮುಂಬಯಿ: ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ.

ಆತ್ಮಹತ್ಯೆಗೂ ಮುನ್ನ ತನ್ನ ಗೆಳೆಯ ರಾಹುಲ್ ರಾಜ್ ಸಿಂಗ್ ಜೊತೆ  ಪ್ರತ್ಯೂಷಾ ಮೊಬೈಲ್ ನಲ್ಲಿ ಸಂಭಾಷಣೆ ನಡೆಸಿದ್ದಳು. ಮೂರು ನಿಮಿಷಗಳ ಸಂಭಾಷಣೆಯಲ್ಲಿ, ಉದ್ಯಮಿಯೊಬ್ಬನ ಜೊತೆ ತಾನು ಹಾಸಿಗೆ ಹಂಚಿಕೊಂಡಿದ್ದ ವಿಷಯದ ಬಗ್ಗೆ ಪ್ರತ್ಯೂಷಾ ಮಾತನಾಡಿದ್ದಳು.

ನಾನು ಇಲ್ಲಿಗೆ ನಟಿಸಲು ಬಂದೆ, ಆದರೆ ನೀನು ನನ್ನನ್ನು ಇಲ್ಲಿಗೆ ಕರೆದು ತಂದು ನಿಲ್ಲಿಸಿದ್ದೀಯಾ, ನಿನಗೆ ಗೊತ್ತಿಲ್ಲ, ಇಂದು ನಾನು ಎಷ್ಟು ನೋವು ಅನುಭವಿಸುತ್ತಿದ್ದೇನೆ, ಎಂಥ ಕೆಟ್ಟ ಭಾವನೆ ನನಗೆ ಮೂಡುತ್ತಿದೆ ಎಂದು ನಿನಗೆ ತಿಳಿದಿಲ್ಲ, ಎಂದು ಹೇಳಿ ಫೋನ್ ಕಟ್ ಮಾಡಿದ್ದಾಳೆ. ಈ ಸಂಭಾಷಣೆ ಪ್ರತಿ ಪ್ರತ್ಯೂಷಾ ಪೋಷಕರ ಪರ ವಕೀಲ ನೀರಜ್ ಗುಪ್ತಾ ಅವರಿಗೆ ಸಿಕ್ಕಿದೆ ಎಂದು ವರದಿಯಾಗಿದೆ.

ಈ ಮಾತುಗಳಿಂದ ರಾಹುಲ್ ರಾಜ್ ಸಿಂಗ್ ಆಕೆಯನ್ನು ವೇಶ್ಯಾವಾಟಿಕೆಗೆ ನಡೆಸಲು ಒತ್ತಾಯಿಸುತ್ತಿದ್ದ ಎಂಬುದಕ್ಕೆ ಪುಷ್ಠಿ ನೀಡುತ್ತವೆ, ಎಂದು ಅವರು ಹೇಳಿದ್ದಾರೆ. ಈ ವರ್ಷದ ಏಪ್ರಿಲ್ 1 ರಂದು ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆಗೆ ಶರಣಾಗಿದ್ದಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT