ಅನಿಲ್ - ಉದಯ್ 
ಸಿನಿಮಾ ಸುದ್ದಿ

ಮಾಸ್ತಿ ಗುಡಿ ದುರಂತ: ಬಡಮಕ್ಕಳನ್ನು ನೀರಿಗೆ ತಳ್ಳಿ ಆಳ ನೋಡಿಬಿಟ್ಟೆಯಲ್ಲಾ ರವಿವರ್ಮಾ- ಜಗ್ಗೇಶ್

'ನೀನು ಅಡಿಮಟ್ಟದಿಂದ ಬಂದವನಾಗಿ ಬಡವರಮಕ್ಕಳ ತಳ್ಳಿ ಆಳನೋಡಿಬಿಟ್ಟೆಯಲ್ಲಾ ರವಿವರ್ಮಾ. ದಿಕ್ಕಾರವಿರಲಿ ನಿನ್ನಡಬ್ಬ ಸಾಹಸಕ್ಕೆ! ...

ಬೆಂಗಳೂರು: 'ನೀನು ಅಡಿಮಟ್ಟದಿಂದ ಬಂದವನಾಗಿ ಬಡವರಮಕ್ಕಳ ತಳ್ಳಿ ಆಳನೋಡಿಬಿಟ್ಟೆಯಲ್ಲಾ ರವಿವರ್ಮಾ. ದಿಕ್ಕಾರವಿರಲಿ ನಿನ್ನಡಬ್ಬ ಸಾಹಸಕ್ಕೆ! ಅಯ್ಯೋ ದೇವರೆ ನಾನುಕಂಡ ಬಡಮಕ್ಕಳು ಹೋಗಿಬಿಟ್ಟರು' ಎಂದು ಹಿರಿಯ ನಟ ಜಗ್ಗೇಶ್ ಅವರು ಮಾಸ್ತಿ ಗುಡಿ ಚಿತ್ರದ ವೇಳೆ ಹೆಲಿಕಾಪ್ಟರ್ ನಿಂದ ಕೆರೆಗೆ ಜಿಗಿದು ಪ್ರಾಣ ಕಳೆದುಕೊಂಡ ಇಬ್ಬರು ಖಳನಟರ ಬಗ್ಗೆ ಟ್ವಿಟರ್ ನಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ.
ಇಂದು ಮಧ್ಯಾಹ್ನ ಮಾಗಡಿ ರಸ್ತೆಯ ತಿಪ್ಪಗೊಂಡನಹಳ್ಳಿಯ ಕೆರೆಯಲ್ಲಿ ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಹೆಲಿಕಾಪ್ಟರ್ ನಿಂದ ಕೆರೆಗೆ ಹಾರಿದ ಖಳನಟರಾದ ಅನಿಲ್ ಮತ್ತು ಉದಯ್ ಅವರು ಮೃತಪಟ್ಟಿದ್ದು, ಈ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಜಗ್ಗೇಶ್ ಅವರು, ಬಡತನದಿಂದ ಬಂದ ಕಂದಮ್ಮಗಳು..ಎರಡು ತುತ್ತಿಗಾಗಿ ದೇಹದಣಿಸಿ ತಯಾರಾಗಿದ್ದ ಬಗೆ ನನ್ನ ಕಣ್ಣಮುಂದಿದೆ. ಎದುರಿಗೆ ಸಿಕ್ಕರೆ ಬಾಯ್ ತುಂಬ ಅಣ್ಣಾಅಂತ ತಬ್ಬುತ್ತಿದ್ದರು. ಹೆಣವಾದರೆ... ಎಂದು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT