ರಾಜವರ್ಧನ್ 
ಸಿನಿಮಾ ಸುದ್ದಿ

'ನಟನ ಮಗನೆಂಬ ಕಾರಣಕ್ಕೆ ನನಗೇನು ಕೆಂಪು ಹಾಸಿನ ಸ್ವಾಗತ ಸಿಗುವುದಿಲ್ಲ': ರಾಜವರ್ಧನ್

ಕನ್ನಡದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ 'ಫ್ಲೈ' ಸಿನೆಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸಿನೆಮಾದ...

ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ 'ಫ್ಲೈ' ಸಿನೆಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸಿನೆಮಾದ ಚಿತ್ರೀಕರಣ ಸ್ಥಗಿತಗೊಂಡಿದೆ "ನಿರ್ಮಾಣದ ತೊಂದರೆಗಳಿಂದ 'ಫ್ಲೈ' ಸಿನೆಮಾದ ಚಿತ್ರೀಕರಣದಲ್ಲಿ ಅಡಚಣೆ ಉಂಟಾಗಿದೆ" ಎನ್ನುತ್ತಾರೆ ರಾಜವರ್ಧನ್. 
ಈಗ ಮತ್ತೊಂದು ಬಹುನಟರ ಚಿತ್ರವೊಂದರಲ್ಲಿ ನಟಿಸಲು ಅವಕಾಶ ಸಿಕ್ಕಿದ್ದು, ರಾಜವರ್ಧನ್ ಖುಷಿಯಿಂದಿದ್ದಾರೆ. 'ನೂರೊಂದು ನೆನಪು' ಸಿನೆಮಾದಾ ಚಿತ್ರೀಕರಣವನ್ನು ರಾಜವರ್ಧನ್ ಮುಗಿಸಿದ್ದಾರೆ. 
ಕುಮಾರೇಶ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್ ಮತ್ತು ಮೇಘನಾ ರಾಜ್ ಜೊತೆಗೆ ರಾಜವರ್ಧನ್ ನಟಿಸಿದ್ದಾರೆ. "ನಾನು 'ಫ್ಲೈ' ಸಿನೆಮಾದಲ್ಲಿ ನೂರಕ್ಕೆ ನೂರು ಪ್ರತಿಶತ ತೊಡಗಿಸಿಕೊಂಡಿದ್ದರು, ನೂರೊಂದು ನೆನಪು ಸಿನೆಮಾದಲ್ಲಿ ಮತ್ತೆ ಮೊದಲಿನಿಂದ ಪ್ರಾರಂಭಿಸಬೇಕಾಯಿತು" ಎನ್ನುತ್ತಾರೆ. 
ಈಗ ನಟ 'ಇರಾ' ಎಂಬ ಹೊಸ ನಿನೆಮಾದಲ್ಲಿ ಕೂಡ ನಟಿಸಲಿದ್ದಾರೆ. "ಪವನ್ ಒಡೆಯರ್ ಅವರ ಬ್ಯಾನರ್ ಇಂದ ಈ ಸಿನೆಮಾ ನಿರ್ಮಾಣ ಆಗುತ್ತಿರುವುದರಿಂದ ಇದನ್ನು ಆಯ್ಕೆ ಮಾಡಿಕೊಂಡೆ" ಎನ್ನುತ್ತಾರೆ ನಟ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT