ಅನಿಲ್-ಉದಯ್ 
ಸಿನಿಮಾ ಸುದ್ದಿ

'ಮಾಸ್ತಿ ಗುಡಿ' ಶೂಟಿಂಗ್ ವೇಳೆ ದುರಂತ: ತಿಪ್ಪಗೊಂಡನಹಳ್ಳಿ ಕೆರೆಗೆ ಹಾರಿದ ಖಳನಟ ಅನಿಲ್, ಉದಯ್ ವಿಧಿವಶ

ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಮಾಗಡಿ ರಸ್ತೆಯಲ್ಲಿರುವ ತಿಪ್ಪಗೊಂಡನಹಳ್ಳಿ..

ಬೆಂಗಳೂರು: ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಮಾಗಡಿ ರಸ್ತೆಯಲ್ಲಿರುವ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರಿದ ಖಳನಟರಾದ ಅನಿಲ್ ಮತ್ತು ಉದಯ್ ಅವರು ನೀರಿನಿಂದ ಮೇಲಕ್ಕೆ ಬಾರದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ದುನಿಯಾ ವಿಜಯ್. ಅನಿಲ್ ಹಾಗೂ ಉದಯ್ ಮೂವರು ಹೆಲಿಕಾಪ್ಟರ್ ನಿಂದ ಕೆರೆಗೆ ಜಿಗಿಯುತ್ತಾರೆ. ಇವರಲ್ಲಿ ದುನಿಯಾ ವಿಜಯ್ ಈಜಿದ್ದು ಅವರನ್ನು ತೆಪ್ಪದ ಮೂಲಕ ದಡಕ್ಕೆ ಕರೆತರಲಾಗಿದೆ. ಆದರೆ ಅನಿಲ್ ಮತ್ತು ಉದಯ್ ಈಜಲು ಬರದೇ ನೀರು ಪಾಲಾಗಿದ್ದಾರೆ. ಚಿತ್ರತಂಡದ ನಿರ್ಲಕ್ಷವೇ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಅಗ್ನಿಶಾಮ ಸಿಬ್ಬಂದಿ, ಪೊಲೀಸರು ಹಾಗೂ ಈಜು ತಜ್ಞರು ಆಗಮಿಸಿದ್ದು ನಟರ ಮೃತದೇಹಗಳಿಗಾಗಿ ತೀವ್ರ ಶೋಧ ನಡೆಯುತ್ತಿದೆ.
ಇಂದು ಮಧ್ಯಾಹ್ನ ಸುಮಾರು 2.45ರ ಸುಮಾರಿಗೆ ಕೆರೆಗೆ ಜಿಗಿದಿದ್ದ ಅನಿಲ್ ಹಾಗೂ ಉದಯ್ ಅವರು ಮೃತಪಟ್ಟಿರುವುದಾಗಿ ತಾವರಕೆರೆ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ ಚಿತ್ರ ತಂಡದ ವಿರುದ್ಧ ಸ್ವಯಂಪ್ರೇರಿತ ಕ್ರಿಮಿನಲ್ ಕೇಸ್ ದಾಖಲಿಸಿಕೊಂಡಿದ್ದಾರೆ. 
ನಾಗಶೇಖರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮಾಸ್ತಿಗುಡಿಗಾಗಿ ರವಿವರ್ಮಾ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಸಾಹಸಕ್ಕಾಗಿ ಅನಿಲ್ ಅವರು ಭಾರಿ ಕಸರತ್ತು ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT