ಅಂಬರೀಶ್ 
ಸಿನಿಮಾ ಸುದ್ದಿ

ಈಜು ಬರುವುದಿಲ್ಲ ಎಂದ ಮೇಲೆ ಇಷ್ಟು ದೊಡ್ಡ ರಿಸ್ಕ್ ತೆಗೆದುಕೊಳ್ಳಬಾರದಿತ್ತು: ಅಂಬರೀಶ್

ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಖಳನಟರಾದ ಅನಿಲ್ ಮತ್ತು ಉದಯ್ ಇಬ್ಬರು ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾದ...

ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಖಳನಟರಾದ ಅನಿಲ್ ಮತ್ತು ಉದಯ್ ಇಬ್ಬರು ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾದ ಹಿನ್ನೆಲೆ ನಟ ಮತ್ತು ಮಾಜಿ ಸಚಿವ ಅಂಬರೀಶ್ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿರುವ ಅಂಬರೀಶ್, ಈಗಿರುವ ಟೆಕ್ನಾಲಜಿಯಲ್ಲಿ ಇಂಥದ್ದೊಂದು ದೊಡ್ಡ ರಿಸ್ಕ್ ತೆಗೆದುಕೊಳ್ಳಬಾರದಿತ್ತು ಎಂದು ಹೇಳಿದ್ದಾರೆ.

ನಿನ್ನೆಯಿಂದ ಈ ಘಟನೆಗಳನ್ನೆಲ್ಲಾ ಟಿವಿಯಲ್ಲಿ ನೋಡುತ್ತಲೇ ಇದ್ದೇನೆ. ಈ ಘಟನೆಗಳಿಂದಾಗಿ ಎದೆ ಜಿಲ್ ಎಂದಿತ್ತು ಎಂದರು. ಇನ್ನು ಚಿತ್ರೀಕರಣ ವೇಳೆ ಅವರಿಬ್ಬರೂ ತಮಗೆ ಈಜು ಬರುವುದಿಲ್ಲ ಎಂದು ಮೇಲೆ ರಿಸ್ಕ್ ತೆಗೆದುಕೊಳ್ಳುವ ಅವಶ್ಯಕತೆ ಇರಲಿಲ್ಲ ಎಂದರು.

ಈಗ ಎಲ್ಲಾ ಮುಗಿದುಹೋಗಿದೆ. ಬೇರೆ ಘಟನೆಗಳಲ್ಲಾದರೆ ಏನಾದರೂ ಮಾಡಬಹುದಿತ್ತೇನೋ. ಆದರೆ, ನೋಡು ನೋಡುತ್ತಿದ್ದಂತೆಯೇ ಎಲ್ಲವೂ ಮುಗಿದು ಹೋಗಿದೆ. ಹಾಗಾಗಿ ಅವರಿಬ್ಬರ ಕುಟುಂಬದವರಿಗೆ ಸಮಾಧಾನ ಹೇಳದೆ ಬೇರೆ ದಾರಿ ಇಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT