ಅಂಬರೀಶ್ 
ಸಿನಿಮಾ ಸುದ್ದಿ

ಈಜು ಬರುವುದಿಲ್ಲ ಎಂದ ಮೇಲೆ ಇಷ್ಟು ದೊಡ್ಡ ರಿಸ್ಕ್ ತೆಗೆದುಕೊಳ್ಳಬಾರದಿತ್ತು: ಅಂಬರೀಶ್

ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಖಳನಟರಾದ ಅನಿಲ್ ಮತ್ತು ಉದಯ್ ಇಬ್ಬರು ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾದ...

ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಖಳನಟರಾದ ಅನಿಲ್ ಮತ್ತು ಉದಯ್ ಇಬ್ಬರು ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾದ ಹಿನ್ನೆಲೆ ನಟ ಮತ್ತು ಮಾಜಿ ಸಚಿವ ಅಂಬರೀಶ್ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿರುವ ಅಂಬರೀಶ್, ಈಗಿರುವ ಟೆಕ್ನಾಲಜಿಯಲ್ಲಿ ಇಂಥದ್ದೊಂದು ದೊಡ್ಡ ರಿಸ್ಕ್ ತೆಗೆದುಕೊಳ್ಳಬಾರದಿತ್ತು ಎಂದು ಹೇಳಿದ್ದಾರೆ.

ನಿನ್ನೆಯಿಂದ ಈ ಘಟನೆಗಳನ್ನೆಲ್ಲಾ ಟಿವಿಯಲ್ಲಿ ನೋಡುತ್ತಲೇ ಇದ್ದೇನೆ. ಈ ಘಟನೆಗಳಿಂದಾಗಿ ಎದೆ ಜಿಲ್ ಎಂದಿತ್ತು ಎಂದರು. ಇನ್ನು ಚಿತ್ರೀಕರಣ ವೇಳೆ ಅವರಿಬ್ಬರೂ ತಮಗೆ ಈಜು ಬರುವುದಿಲ್ಲ ಎಂದು ಮೇಲೆ ರಿಸ್ಕ್ ತೆಗೆದುಕೊಳ್ಳುವ ಅವಶ್ಯಕತೆ ಇರಲಿಲ್ಲ ಎಂದರು.

ಈಗ ಎಲ್ಲಾ ಮುಗಿದುಹೋಗಿದೆ. ಬೇರೆ ಘಟನೆಗಳಲ್ಲಾದರೆ ಏನಾದರೂ ಮಾಡಬಹುದಿತ್ತೇನೋ. ಆದರೆ, ನೋಡು ನೋಡುತ್ತಿದ್ದಂತೆಯೇ ಎಲ್ಲವೂ ಮುಗಿದು ಹೋಗಿದೆ. ಹಾಗಾಗಿ ಅವರಿಬ್ಬರ ಕುಟುಂಬದವರಿಗೆ ಸಮಾಧಾನ ಹೇಳದೆ ಬೇರೆ ದಾರಿ ಇಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT