ಮಾಸ್ತಿಗುಡಿ ಚಿತ್ರೀಕರಣ ಅವಘಡದಲ್ಲಿ ಪ್ರಾಣ ಕಳೆದುಕೊಂಡ ನಟರಾದ ಅನಿಲ್ ಮತ್ತು ವಿಜಯ್ 
ಸಿನಿಮಾ ಸುದ್ದಿ

ಮುಂದಿನ ನಿರ್ಧಾರದವರೆಗೂ ಸಿನೆಮಾ ಚಟುವಟಿಕೆಗಳಿಂದ ಮಾಸ್ತಿಗುಡಿ ತಂಡಕ್ಕೆ ತಡೆ: ವಾಣಿಜ್ಯ ಮಂಡಳಿ

ರಾಜ್ಯವನ್ನು ಬೆಚ್ಚಿಬೀಳಿಸಿದ ಮಾಸ್ತಿಗುಡಿ ಚಿತ್ರೀಕರಣ ದುರ್ಘಟನೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದಾಗಿದೆ.

ಬೆಂಗಳೂರು: ರಾಜ್ಯವನ್ನು ಬೆಚ್ಚಿಬೀಳಿಸಿದ ಮಾಸ್ತಿಗುಡಿ ಚಿತ್ರೀಕರಣ ದುರ್ಘಟನೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದಾಗಿದೆ. 
ಈ ವಿಷಯವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ ರಾ ಗೋವಿಂದು ಪ್ರತಿಕ್ರಿಯಿಸಿದ್ದು, "ಮಾಸ್ತಿಗುಡಿ ಚಿತ್ರದ ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ, ನಟ ದುನಿಯಾ ವಿಜಯ್, ನಿರ್ಮಾಪಕ ಸುಂದರ್ ಪಿ ಗೌಡ ಅವರು ಯಾವುದೇ ರೀತಿಯ ಸಿನಿಮಾ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಚಲನಚಿತ್ರ ವಾಣಿಜ್ಯ ಮಂಡಳಿ ತಡೆ ನೀಡಿದೆ" ಎಂದು ಹೇಳಿದ್ದಾರೆ. 
ಸೋಮವಾರ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮಾಸ್ತಿಗುಡಿ ಸಿನೆಮಾದ ಚಿತ್ರೀಕರಣ ನಡೆಯುವ ವೇಳೆ ಹೆಲಿಕ್ಯಾಪ್ಟಾರ್ ನಿಂದ ಜಿಗಿಯುವ ಸ್ಟಂಟ್ ಮಾಡಲು ಹೋಗಿ ಉದಯೋನ್ಮುಖ ನಟರಾದ ಅನಿಲ್ ಮತ್ತು ಉದಯ್ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದರು. ಈ ಸಮಯದಲ್ಲಿ ದುನಿಯಾ ವಿಜಯ್ ಕೂಡ ಜಿಗಿದಿದ್ದರು ಸುರಕ್ಷಿತವಾಗಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದರು. 
ಚಿತ್ರೀಕರಣದ ಸಮಯದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ದೇಶದಾದ್ಯಂತ ಚಿತ್ರತಂಡದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರು ನಿರ್ದೇಶಕ, ನಿರ್ಮಾಪಕ, ಕಾರ್ಯಕಾರಿ ನಿರ್ಮಾಪಕ ಮತ್ತು ಸಾಹಸ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT