ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

'ಬಂಗಾರ s/೦ ಬಂಗಾರದ ಮನುಷ್ಯ'ದಲ್ಲಿ ರೈತರಿಗೆ ಗೌರವ ಸೂಚಿಸುವ ಹಾಡು

ಶಿವರಾಜ್ ಕುಮಾರ್ ಅಭಿನಯದ 'ಬಂಗಾರ s/೦ ಬಂಗಾರದ ಮನುಷ್ಯ' ಸಿನೆಮಾದ ಚಿತ್ರತಂಡ ಕಳೆದ ವಾರ ಎರಡು ಡ್ಯುಯೆಟ್ ಹಾಡುಗಳಿಗೆ ಚಿತ್ರೀಕರಣ ನಡೆಸಿ ಸದ್ಯಕ್ಕೆ ಮಂಡ್ಯದಲ್ಲಿ ನೆಲೆಯೂರಿದೆ. ಈಗ ರೈತರ

ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ 'ಬಂಗಾರ s/೦ ಬಂಗಾರದ ಮನುಷ್ಯ' ಸಿನೆಮಾದ ಚಿತ್ರತಂಡ ಕಳೆದ ವಾರ ಎರಡು ಡ್ಯುಯೆಟ್ ಹಾಡುಗಳಿಗೆ ಚಿತ್ರೀಕರಣ ನಡೆಸಿ ಸದ್ಯಕ್ಕೆ ಮಂಡ್ಯದಲ್ಲಿ ನೆಲೆಯೂರಿದೆ. ಈಗ ರೈತರ ಉದ್ದೇಶಿಸಿ ಸಂಭ್ರಮದಲ್ಲಿ ಮುಂದಿನ ಹಾಡಿನ ಚಿತ್ರೀಕರಣದಲ್ಲಿ ನಿರತವಾಗಿದೆ. 
ಶಿವರಾಜ್ ಕುಮಾರ್, ವಿದ್ಯಾ ಪ್ರದೀಪ್, ವಿಶಾಲ್ ಹೆಗಡೆ, ಸಾಧು ಕೋಕಿಲ, ಚಿಕ್ಕಣ್ಣ ಮತ್ತು ಇಡೀ ಚಿತ್ರತಂಡ ಹಸಿರುವ ಪ್ರದೇಶದಲ್ಲಿ ಈ ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿರುವುದಕ್ಕೆ ನಿರ್ದೇಶಕ ಯೋಗಿ ಜಿ ರಾಜ್ ಉತ್ಸಾಹದಿಂದಿದ್ದಾರೆ. ಈ ಹಂತದ ಚಿತ್ರೀಕರಣದ ಬಗ್ಗೆ ಮಾತನಾಡುವ ನಿರ್ದೇಶಕ "ರಾಜಕುಮಾರ್ ನಟನೆಯ 'ಬಂಗಾರದ ಮನುಷ್ಯ' ಸಿನೆಮಾಗೂ ಈ ಸಿನೆಮಾದ ಕಥೆಗೂ ಯಾವುದೇ ಸಂಬಂಧವಿಲ್ಲ. ನಾನು ನನ್ನ ಸಿನೆಮಾವನ್ನು ದೇಶದ ರೈತರಿಗೆ ಅರ್ಪಿಸುತ್ತಿದ್ದೇನೆ. ನಾಗೇಂದ್ರ ಪ್ರಸಾದ್ ಗೀತ ರಚನೆ ಮಾಡಿರುವ "ತೆನೆಗೆ ತೆನೆ ಸಿಹಿ ಮುತ್ತು, ಹೊಸ ಗಾಳಿ ಬೀಸುವಾಗ... ಬೆವರ ಹನಿ ನಮಗ್ಗೊತ್ತು.. ರೈತ ನಮ್ಮ ತಾಯಿಯಂತೆ.. ಅವನ ಆಸ್ತಿ ನೇಗಿಲು' ಹಾಡು ರೈತರ ಗೌರವಸೂಚಕವಾಗಿ ಬರೆದಿರುವುದು" ಎಂದು ಹೇಳಿದ್ದಾರೆ. 
ತಾವು ಹಳ್ಳಿಗಳಲ್ಲಿ ತಮ್ಮ ಬಾಲ್ಯ ಕಳೆದಿದ್ದನ್ನು ನೆನಪಿಸಿಕೊಳ್ಳುವ ನಿರ್ದೇಶಕ "ನಾನು ನಗರದಲ್ಲಿ ಜನಿಸಿದರು, ನನ್ನ ಬಾಲ್ಯದ ಹೆಚ್ಚಿನ ದಿನಗಳನ್ನು ತನ್ನ ತಾತ-ಅಜ್ಜಿ ಜೊತೆಗೆ ಹಳ್ಳಿಗಳಲ್ಲೇ ಕಳೆದಿದ್ದು. ನಾನು ರೈತರನ್ನು ನೋಡುತ್ತಾ ಬೆಳೆದೆ, ಆದುದರಿಂದ ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಡಬಲ್ಲೆ" ಎನ್ನುತ್ತಾರೆ. 
ಡಾ. ರಾಜಕುಮಾರ್ ಜೊತೆಗೆ ನಟಿಸಿರುವ ಹಲವು ಹಿರಿಯ ನಟರು ಈ ಸಿನೆಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ನಿರ್ದೇಶಕ "ಶ್ರೀನಾಥ್, ಶ್ರೀನಿವಾಸ ಮೂರ್ತಿ, ಶಿವರಾಂ ಅಣ್ಣ, ಹೊನ್ನವಳ್ಳಿ ಕೃಷ್ಣ, ಬ್ರಹಮ್ಮ ಮತ್ತು ಕುಳ್ಳಿ ಜಯಕ್ಕ ಈ ಸಿನೆಮಾದಲ್ಲಿ ನಟಿಸಲಿದ್ದಾರೆ ಎನ್ನುತ್ತಾರೆ. 
ವಿ ಹರಿಕೃಷ್ಣ ಸಂಗೀತ ನೀಡಿದ್ದು, ಜೈ ಆನಂದ್ ಅವರ ಸಿನೆಮ್ಯಾಟೋಗ್ರಫಿ ಚಿತ್ರಕ್ಕಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT