ಚೇತನ್ ಹಾಗೂ ಲತಾ ಹೆಗಡೆ 
ಸಿನಿಮಾ ಸುದ್ದಿ

ಮಹೇಶ್ ಬಾಬು ನಿರ್ದೇಶನದ ಕಮರ್ಷಿಯಲ್ ಚಿತ್ರದಲ್ಲಿ ಚೇತನ್ ಅಭಿನಯ

ಸ್ಯಾಂಡಲ್ ವುಡ್ ನ ಬುದ್ಧಿವಂತ ನಟ ಎಂದೇ ಖ್ಯಾತಿ ಪಡೆದಿರುವ ಚೇತನ್ ತಮ್ಮ ನೂರೊಂದು ನೆನಪು ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ...

ಬೆಂಗಳೂರು: ಸ್ಯಾಂಡಲ್ ವುಡ್ ನ ಬುದ್ಧಿವಂತ ನಟ ಎಂದೇ ಖ್ಯಾತಿ ಪಡೆದಿರುವ ಚೇತನ್ ತಮ್ಮ ನೂರೊಂದು ನೆನಪು ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ.

ನಿರ್ದೇಶಕ ಮಹೇಶ್ ಬಾಬು ಸಾರಥ್ಯದಲ್ಲಿ ಬರುತ್ತಿರುವ ಇನ್ನೂ ಹೆಸರಿಡದ ಹೊಸ ಚಿತ್ರದಲ್ಲಿ ಚೇತನ್ ನಟಿಸುತ್ತಿದ್ದಾರೆ. ನವೆಂಬರ್ 9 ರಂದ ಚಿತ್ರಕ್ಕೆ ಮುಹೂರ್ಥ ನೆರವೇರಲಿದ್ದು ಮೈಸೂರಿನಲ್ಲಿ ಶೂಟಿಂಗ್ ನಡೆಯಲಿದೆ.

ಲತಾ ಹೆಗಡೆ ಚೇತನ್ ಗೆ ನಾಯಕಿಯಾಗಿ ಈ ಚಿತ್ರದಲ್ಲಿ ನಟಿಸಲಿದ್ದಾರೆ. 40 ದಿನಗಳ ಕಾಲ ಮೈಸೂರಿನಲ್ಲಿ ಶೂಟಿಂಗ್ ನಡೆಯಲಿದೆ, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನಿರ್ದೇಶಕ ಮಹೇಶ್ ಬಾಬು ತಿಳಿಸಿದ್ದಾರೆ.

ಈ ಚಿತ್ರದಲ್ಲಿ ಚೇತನ್ ಮಾಧ್ಯಮ ವರದಿಗಾರರಾಗಿ ಕಾಣಿಸಿಕೊಂಡು ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲಿದ್ದಾರೆ. ಈ ಚಿತ್ರದ ಮೂಲಕ ನಟ ಚೇತನ್ ಪ್ರೇಕ್ಷಕರಿಗೆ ಸಾಮಾಜಿಕ ಸಂದೇಶ ನೀಡಲಿದ್ದಾರೆ.

ಇನ್ನು ನಟಿ ಲತಾ ಹೆಗ್ಡೆ ತುಂಬಾ ಚೆನ್ನಾಗಿ ಕನ್ನಡ ಮಾತನಾಡಲಿದ್ದು, ತಮ್ಮ ನಟನೆಯ ಮೂಲಕ ಪ್ರೇಕ್ಷಕರನ್ನು ಆಕರ್ಷಿಸಲಿದ್ದಾರೆ. ಖಳನಾಯಕ ಪಾತ್ರದಲ್ಲಿ ಕಬೀರ್ ದುಹಾನ್ ಸಿಂಗ್ ಅಭಿನಯಿಸಲಿದ್ದು, ಪ್ರೇಮ್, ಡಾ. ವೇಣುಗೋಪಾಲ್ ಹಾಗೂ ಗಂಡಸಿ ಮಂಜುನಾಥ್ ಚಿತ್ರದ ನಿರ್ಮಾಪಕರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT