ಜೀವಮಾನದ ಸಾಧನೆಗಾಗಿ ಪ್ರಶಸ್ತಿ ಸ್ವೀಕರಿಸಿದ ಚಿತ್ರರಂಗದ ಗಣ್ಯರು 
ಸಿನಿಮಾ ಸುದ್ದಿ

ವರನಟ ಡಾ.ರಾಜ್ ಕುಮಾರ್ ಜನ್ಮದಿನದಂದೇ ಚಲನಚಿತ್ರ ಪ್ರಶಸ್ತಿ ಪ್ರದಾನ: ಸಿಎಂ

ಮೇರುನಟ ಡಾ.ರಾಜ್‌ಕುಮಾರ್‌ ಜನ್ಮದಿನವಾದ ಏಪ್ರಿಲ್ 24ರಂದು ಸಮಾರಂಭ ಆಯೋಜಿಸಿ ಅಂದೇ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು...

ಬೆಂಗಳೂರು: ಮೇರುನಟ ಡಾ.ರಾಜ್‌ಕುಮಾರ್‌ ಜನ್ಮದಿನವಾದ ಏಪ್ರಿಲ್ 24ರಂದು ಸಮಾರಂಭ ಆಯೋಜಿಸಿ ಅಂದೇ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಜಿಕೆವಿಕೆಯಲ್ಲಿನ ಡಾ.ಬಾಬು ರಾಜೇಂದ್ರ ಪ್ರಸಾದ್‌ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ರವಿವಾರ ವಾರ್ತಾ ಇಲಾಖೆ ಹಮ್ಮಿಕೊಂಡಿದ್ದ 2014 ಮತ್ತು 2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದ ಅವರು, ಎರಡು ವರ್ಷಗಳ ಪ್ರಶಸ್ತಿಯನ್ನು ಒಮ್ಮೆ ನೀಡುವುದರಿಂದ ಸಮಯ ವ್ಯರ್ಥವಾಗಲಿದೆ. ಹೀಗಾಗಿ ಮುಂದಿನ ವರ್ಷದಿಂದ ಆಯಾ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಅದೇ ವರ್ಷ ನೀಡಲು ತೀರ್ಮಾನಿಸಲಾಗಿದೆ ಎಂದರು.

2014ನೇ ಸಾಲಿನಲ್ಲಿ ಅತ್ಯುತ್ತಮ ಚಿತ್ರ ‘ಹರಿವು’, ಅತ್ಯುತ್ತಮ ನಟ ಸಂಚಾರಿ ವಿಜಯ್‌, ಅತ್ಯುತ್ತಮ ನಟಿ ಲಕ್ಷ್ಮೀ ಗೋಪಾಲಸ್ವಾಮಿ ಹಾಗೂ 2015ನೇ ಸಾಲಿನಲ್ಲಿ ಅತ್ಯುತ್ತಮ ಚಿತ್ರ ‘ತಿಥಿ’, ಅತ್ಯುತ್ತಮ ನಟ ವಿಜಯ ರಾಘವೇಂದ್ರ, ಅತ್ಯುತ್ತಮ ನಟಿ ಮಾಲಾಶ್ರೀ ಸೇರಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜೀವಿತಾವಧಿ ಸಾಧನೆಗಾಗಿ 2014 ರಲ್ಲಿ ಬಸಂತಕುಮಾರ್‌ ಪಾಟೀಲ್‌, ಡಾ. ಬರಗೂರು ರಾಮಚಂದ್ರಪ್ಪ, ಸುರೇಶ್‌ ಅರಸ್‌ ಹಾಗೂ 2015ನೇ ಸಾಲಿನಲ್ಲಿ ಹರಿಣಿ, ನಾಗತಿಹಳ್ಳಿ ಚಂದ್ರಶೇಖರ್‌ ಮತ್ತು ರಾಜನ್‌ ಅವರಿಗೆ ಪುಟ್ಟಣ ಕಣಗಾಲ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT