ಜೀವಮಾನದ ಸಾಧನೆಗಾಗಿ ಪ್ರಶಸ್ತಿ ಸ್ವೀಕರಿಸಿದ ಚಿತ್ರರಂಗದ ಗಣ್ಯರು 
ಸಿನಿಮಾ ಸುದ್ದಿ

ವರನಟ ಡಾ.ರಾಜ್ ಕುಮಾರ್ ಜನ್ಮದಿನದಂದೇ ಚಲನಚಿತ್ರ ಪ್ರಶಸ್ತಿ ಪ್ರದಾನ: ಸಿಎಂ

ಮೇರುನಟ ಡಾ.ರಾಜ್‌ಕುಮಾರ್‌ ಜನ್ಮದಿನವಾದ ಏಪ್ರಿಲ್ 24ರಂದು ಸಮಾರಂಭ ಆಯೋಜಿಸಿ ಅಂದೇ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು...

ಬೆಂಗಳೂರು: ಮೇರುನಟ ಡಾ.ರಾಜ್‌ಕುಮಾರ್‌ ಜನ್ಮದಿನವಾದ ಏಪ್ರಿಲ್ 24ರಂದು ಸಮಾರಂಭ ಆಯೋಜಿಸಿ ಅಂದೇ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಜಿಕೆವಿಕೆಯಲ್ಲಿನ ಡಾ.ಬಾಬು ರಾಜೇಂದ್ರ ಪ್ರಸಾದ್‌ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ರವಿವಾರ ವಾರ್ತಾ ಇಲಾಖೆ ಹಮ್ಮಿಕೊಂಡಿದ್ದ 2014 ಮತ್ತು 2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದ ಅವರು, ಎರಡು ವರ್ಷಗಳ ಪ್ರಶಸ್ತಿಯನ್ನು ಒಮ್ಮೆ ನೀಡುವುದರಿಂದ ಸಮಯ ವ್ಯರ್ಥವಾಗಲಿದೆ. ಹೀಗಾಗಿ ಮುಂದಿನ ವರ್ಷದಿಂದ ಆಯಾ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಅದೇ ವರ್ಷ ನೀಡಲು ತೀರ್ಮಾನಿಸಲಾಗಿದೆ ಎಂದರು.

2014ನೇ ಸಾಲಿನಲ್ಲಿ ಅತ್ಯುತ್ತಮ ಚಿತ್ರ ‘ಹರಿವು’, ಅತ್ಯುತ್ತಮ ನಟ ಸಂಚಾರಿ ವಿಜಯ್‌, ಅತ್ಯುತ್ತಮ ನಟಿ ಲಕ್ಷ್ಮೀ ಗೋಪಾಲಸ್ವಾಮಿ ಹಾಗೂ 2015ನೇ ಸಾಲಿನಲ್ಲಿ ಅತ್ಯುತ್ತಮ ಚಿತ್ರ ‘ತಿಥಿ’, ಅತ್ಯುತ್ತಮ ನಟ ವಿಜಯ ರಾಘವೇಂದ್ರ, ಅತ್ಯುತ್ತಮ ನಟಿ ಮಾಲಾಶ್ರೀ ಸೇರಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜೀವಿತಾವಧಿ ಸಾಧನೆಗಾಗಿ 2014 ರಲ್ಲಿ ಬಸಂತಕುಮಾರ್‌ ಪಾಟೀಲ್‌, ಡಾ. ಬರಗೂರು ರಾಮಚಂದ್ರಪ್ಪ, ಸುರೇಶ್‌ ಅರಸ್‌ ಹಾಗೂ 2015ನೇ ಸಾಲಿನಲ್ಲಿ ಹರಿಣಿ, ನಾಗತಿಹಳ್ಳಿ ಚಂದ್ರಶೇಖರ್‌ ಮತ್ತು ರಾಜನ್‌ ಅವರಿಗೆ ಪುಟ್ಟಣ ಕಣಗಾಲ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT