'ಬದ್ಮಾಶ್' ನಿರ್ದೇಶಕ ಆಕಾಶ್ ಶ್ರೀವತ್ಸ 
ಸಿನಿಮಾ ಸುದ್ದಿ

ನಿರ್ದೇಶಕನಿಂದ ನಟನವರೆಗೆ 'ಬದ್ಮಾಶ್'ನಲ್ಲಿ ಎಲ್ಲರೂ ಎಂಜಿನಿಯರ್ ಗಳೇ!

ಎಂಜಿನಿಯರಿಂಗ್ ಪದವೀಧರರು ಅನ್ಯ ಕ್ಷೇತ್ರಗಳಲ್ಲಿ ಮಿಂಚುವುದು ಇತ್ತೀಚಿಗೆ ಸರ್ವೇ ಸಾಮಾನ್ಯವಾಗಿರುವ ಸಮಯದಲ್ಲಿ, ಕನ್ನಡ ಚಿತ್ರರಂಗ ಕೂಡ ಸಿನೆಮಾ ಕಲೆಯ ಬಗ್ಗೆ ತೀವ್ರಾಸಕ್ತಿ ಇರುವ ಎಂಜಿನಿಯರ್ ಗಳನ್ನು

ಬೆಂಗಳೂರು: ಎಂಜಿನಿಯರಿಂಗ್ ಪದವೀಧರರು ಅನ್ಯ ಕ್ಷೇತ್ರಗಳಲ್ಲಿ ಮಿಂಚುವುದು ಇತ್ತೀಚಿಗೆ ಸರ್ವೇ ಸಾಮಾನ್ಯವಾಗಿರುವ ಸಮಯದಲ್ಲಿ, ಕನ್ನಡ ಚಿತ್ರರಂಗ ಕೂಡ ಸಿನೆಮಾ ಕಲೆಯ ಬಗ್ಗೆ ತೀವ್ರಾಸಕ್ತಿ ಇರುವ ಎಂಜಿನಿಯರ್ ಗಳನ್ನು ಕರೆದು ಅಪ್ಪಿಕೊಂಡಿರುವುದು ವಿಶೇಷ. 
ಈ ಸಂಖ್ಯೆ ದಿನೇ ದಿನಕ್ಕೆ ಹೆಚ್ಚುತ್ತಿದೆ ಕೂಡ. 'ಬದ್ಮಾಶ್' ಚಿತ್ರತಂಡದಲ್ಲೇ ೧೧ ಜನ ಎಂಜಿನಿಯರ್ ಗಳಿದ್ದಾರೆ. ನಿರ್ದೇಶಕ ಆಕಾಶ್ ಶ್ರೀವತ್ಸ, ನಟ ಧನಂಜಯ್, ನಿರ್ಮಾಪಕ ರವಿ ಕಶ್ಯಪ್, ಸ್ಕ್ರೀನ್ ಪ್ಲೆ ಬರಹಗಾರ ಸಂತೋಷ್, ಸಂಭಾಷಣಕಾರ ವಿನೋದ್ ಪ್ರತೀಕ್, ಕಾರ್ಯಕಾರಿ ನಿರ್ಮಾಪಕರಾದ ಮಹೇಶ್, ವಿವೇಕ್, ನಾಗಭೂಷಣ್, ಪ್ರಿಯಾಂಕ್ ಹಾಗು ಸಹ ನಿರ್ದೇಶಕ ಅನೂಪ್ ಇವರೆಲ್ಲರೂ ಎಂಜಿನಿಯರಿಂಗ್ ಪದವೀಧರರೇ!
"ನಾವು ಶಿಕ್ಷಣದ ಸಲುವಾಗಿ ಎಂಜಿನಿಯರಿಂಗ್ ಓದಿದೆವು. ಆದರೆ ನಮ್ಮ ಗುರಿಯೇ ಬೇರೆ ಇತ್ತು. ನಮ್ಮ ತಂಡದಲ್ಲಿ ಎಲ್ಲರೂ ತಮ್ಮ ಕನಸುಗಳ ಬೆನ್ನು ಹತ್ತಿರುವವರು" ಎನ್ನುತ್ತಾರೆ ನಿರ್ದೇಶಕ ಆಕಾಶ್. 
"ನನ್ನ ಪದವಿ ಪರೀಕ್ಷೆಯ ಫಲಿತಾಂಶ ಬಂದ ದಿನದಿಂದಲೇ ನನ್ನ ಸಿನೆಮಾ ವೃತ್ತಿ ಜೀವನ ಪ್ರಾರಂಭಿಸಿದೆ. ೨೦೦೫ ರಲ್ಲಿ ನನಗೆ ನನ್ನ ಪಯಣದ ಬಗ್ಗೆ ಯಾವುದೇ ಗೊತ್ತು ಗುರಿಯಿರಲಿಲ್ಲ. ನಾನು ಗಾಂಧಿನಗರದಲ್ಲಿ ಅಲೆದಾಡುತ್ತಿದ್ದೆ. ಅಲ್ಲಿ ನಿರ್ಮಾಣ ತಂಡದ ಸಹಾಯಕನಾಗಿ ಸೇರಿಕೊಂಡೆ" ಎಂದು ನೆನಪಿಸಿಕೊಳ್ಳುತ್ತಾರೆ ನಿರ್ದೇಶಕ. 
ನಟ-ನಿರ್ದೇಶಕ ಮತ್ತೊಬ್ಬ ಎಂಜಿನಿಯರ್ ರಮೇಶ್ ಅರವಿಂದ್ ತಮ್ಮ ಸಲಹೆಗಾರ ಮತ್ತು ಗಾಡ್ ಫಾದರ್ ಎಂದು ಕರೆದುಕೊಳ್ಳುವ ಆಕಾಶ್ "ಅವರಿಲ್ಲದೆ ಹೋಗಿದ್ದರೆ ನಾನಿಲ್ಲಿ ಇರುತ್ತಿರಲಿಲ್ಲ. ಅವರು ನಟ-ನಿದೇಶಕನಾಗಿ ನನಗೆ ಸಿನೆಮಾ ವ್ಯಾಕರಣ ಹೇಳಿಕೊಟ್ಟರು" ಎನ್ನುತ್ತಾರೆ.
'ಸುಳ್ಳೇ ಸತ್ಯ' ಸಿನೆಮಾದ ಮೂಲಕ ತಮ್ಮ ನಿರ್ದೇಶಕ ವೃತ್ತಿ ಜೀವನ ಪ್ರಾರಂಭಿಸಿದ ಆಕಾಶ್ ಅವರಿಗೆ 'ಬದ್ಮಾಶ್' ಮೊದಲ ಫೀಚರ್ ಸಿನೆಮಾ. ಇದಕ್ಕೆ ಅವರೇ ಚಿತ್ರಕಥೆ ರಚಿಸಿದ್ದು ಧನಂಜಯ್ ಮತ್ತು ಸಂಚಿತಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT