ಅಶೋಕ್ ಬಾದರದಿನ್ನಿ 
ಸಿನಿಮಾ ಸುದ್ದಿ

ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ವಿಧಿವಶ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ಅವರು ಗುರುವಾರ ವಿಧಿವಶರಾಗಿದ್ದಾರೆ...

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ಅವರು ಗುರುವಾರ ವಿಧಿವಶರಾಗಿದ್ದಾರೆ.

ಅಲ್ಸರ್ ನಿಂದ ಬಳಲುತ್ತಿದ್ದ ಅಶೋಕ್ ಬಾದರದಿನ್ನಿ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗಿನ ಜಾವ 4.40ರ ಸುಮಾರಿಗೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಚಿತ್ರದುರ್ಗ ನಗರದ ಐಯುಡಿಸಿ ಲೇಔಟ್ ನ ಮನೆಯ ಆವರಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತಿದ್ದು, ಇಂದು ಸಂಜೆ ವೇಳೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅಶೋಕ್ ಬಾದರದಿನ್ನಿ ಅವರು ರಂಗಭೂಮಿ ಕಲಾವಿದರಾಗಿದ್ದು, ಸನಾದಿ ಅಪ್ಪಣ್ಣ, ಅಂಜಗಂಡು, ಯುದ್ಧಖಂಡ ಸೇರಿದಂತೆ ಸಾಕಷ್ಟು ಚಲನಚಿತ್ರಗಳಲ್ಲಿ ಅಭಿನಯಿಸಿ ಖ್ಯಾತಿಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT