ಶಿವರಾಜ್ ಕುಮಾರ್ ದಂಪತಿಗೆ ವಿವಾಹ ಆಮಂತ್ರಣ ಪತ್ರಿಕೆ ನೀಡುತ್ತಿರುವ ನಟ ಯಶ್ 
ಸಿನಿಮಾ ಸುದ್ದಿ

ವಿಭಿನ್ನ ರೀತಿಯಲ್ಲಿ ಮದುವೆ ಆಮಂತ್ರಣ ಪತ್ರಿಕೆ ಹಂಚುತ್ತಿರುವ ನಟ ಯಶ್

ನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ವಿವಾಹ ಸಮಾರಂಭ ಡಿಸೆಂಬರ್ 10 ಮತ್ತು 11 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ...

ಬೆಂಗಳೂರು: ನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ವಿವಾಹ ಸಮಾರಂಭ ಡಿಸೆಂಬರ್ 10 ಮತ್ತು 11 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

ತಮ್ಮ ಮದುವೆಗಾಗಿ ಯಶ್ ಎಲ್ಲರಿಗೂ ಆಮಂತ್ರಣ ಪತ್ರಿಕೆ ಹಂಚುತ್ತಿದ್ದಾರೆ, ಇದರಲ್ಲಿ ವಿಶೇಷ ಏನು ಎಂದು ಕೇಳಬೇಡಿ. ವಿವಾಹ ಆಮಂತ್ರಣ ಪತ್ರಿಕೆ ಜೊತೆಗೆ ಯಶ್ ಮಲ್ಲಿಗೆ ಗಿಡವೊಂದನ್ನು ನೀಡುತ್ತಿದ್ದಾರೆ.

ಆದಿ ಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಮೊದಲ ಆಮಂತ್ರಣ ಪತ್ರಿಕೆ ನೀಡಿರುವ ಯಶ್, ರಾಜ್ ಕುಮಾರ್ ಕುಟುಂಬಕ್ಕೆ ಎರಡನೇ ಪತ್ರಿಕೆ ನೀಡಿದ್ದಾರೆ.

ಯಶೋಮಾರ್ಗ ಫೌಂಡಶನ್ ನಡೆಸುತ್ತಿರುವ ಯಶ್ ಹಲವು ಪರಿಸರ ಸ್ನೇಹಿ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ತಮ್ಮ ವಿವಾಹ ಪತ್ರಿಕೆಗಾಗಿ ನಿರ್ದೇಶಕ ಯೋಗರಾಜ್ ಭಟ್ ಅವರ ಸಹಾಯ ಪಡೆದಿದ್ದಾರೆ. ಕೈ ಬರಹ ಹಾಗೂ ಹೆಬ್ಬೆರಳು ಸಹಿ ಆಮಂತ್ರಣ ಪತ್ರಿಕೆಯಲ್ಲಿದೆ. ಹೃದಯದ ಆಕಾರದಲ್ಲಿರುವ ಆಮಂತ್ರಣ ಪತ್ರಿಕೆಯಲ್ಲಿ ಶಿವ ಹಾಗೂ ಪಾರ್ವತಿ ಫೋಟೋ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT