ನಟ ಪೃಥ್ವಿ 
ಸಿನಿಮಾ ಸುದ್ದಿ

ಪ್ರೀತಮ್ ಗುಬ್ಬಿ ಜೊತೆಗೆ ಪೃಥ್ವಿ ಮತ್ತೊಂದು ಚಲನಚಿತ್ರ?

ಖ್ಯಾತ ಸಂಗೀತ ನಿರ್ದೇಶಕ ಜಿ ಕೆ ವೆಂಕಟೇಶ್ ಅವರ ಮೊಮ್ಮಗ ನಟ ಪೃಥ್ವಿ ಕನ್ನಡ ಚಿತ್ರರಂಗದಲ್ಲಿ ನಿಧಾನಕ್ಕೆ ನೆಲೆಯೂರುತ್ತಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನದ 'ನಾನು ಮತ್ತು ವರಲಕ್ಷ್ಮಿ' ಸಿನೆಮಾದಲ್ಲಿ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಜಿ ಕೆ ವೆಂಕಟೇಶ್ ಅವರ ಮೊಮ್ಮಗ ನಟ ಪೃಥ್ವಿ ಕನ್ನಡ ಚಿತ್ರರಂಗದಲ್ಲಿ ನಿಧಾನಕ್ಕೆ ನೆಲೆಯೂರುತ್ತಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನದ 'ನಾನು ಮತ್ತು ವರಲಕ್ಷ್ಮಿ' ಸಿನೆಮಾದಲ್ಲಿ ಚೊಚ್ಚಲ ಬಾರಿಗೆ ನಾಯಕ ನಟನಾಗಿ ಹೊರಹೊಮ್ಮಿರುವ ಪೃಥ್ವಿ ಈಗ ತಮ್ಮ ಮೂರನೇ ಸಿನೆಮಾದಲ್ಲಿ ಕೂಡ ಪ್ರೀತಮ್ ಜೊತೆಗೂಡಲಿದ್ದಾರೆ ಎನ್ನುತ್ತವೆ ಮೂಲಗಳು. 
ಈ ಯುವ ನಟ ಈಗಾಗಲೇ ತಮ್ಮ ಎರಡನೇ ಸಿನೆಮಾ 'ಮುತ್ತಿನ ಹಾರ'ದಲ್ಲೂ ನಟಿಸುತ್ತಿದ್ದು, ಹೊಂಬಾಳೆ ಫಿಲಂಸ್ ನಿರ್ಮಾಣದ ಸಿನೆಮಾಗೆ ಕೂಡ ಈಗ ಆಯ್ಕೆಯಾಗಿದ್ದಾರೆ. ಈ ಸಿನೆಮಾದ ನಿರ್ದೇಶಕ ಪ್ರೀತಮ್ ಗುಬ್ಬಿ ಎನ್ನುತ್ತವೆ ಮೂಲಗಳು. 
ಮೂಲಗಳು ತಿಳಿಸುವಂತೆ ಸದ್ಯಕ್ಕೆ ಮಾತುಕತೆ ಜಾರಿಯಲ್ಲಿದ್ದು, ಎಲ್ಲವು ನಿಶ್ಚಯದಂತೆ ನೆರವೇರಿದರೆ, ಹೊಂಬಾಳೆ ಫಿಲಂಸ್ ಎರಡನೇ ಬಾರಿಗೆ ನಟ ಮತ್ತು ನಿರ್ದೇಶನನ್ನು ಜೊತೆಗೂಡಿಸಲಿದೆ. ಈ ನಿರ್ಮಾಣ ಸಂಸ್ಥೆ ಈ ಹಿಂದೆ ಪುನೀತ್ ರಾಜಕುಮಾರ್ ಅವರ 'ನಿನ್ನಿಂದಲೆ' ಮತ್ತು ಯಶ್ ಅವರ 'ಮಾಸ್ಟರ್ ಪೀಸ್' ಕೂಡ ನಿರ್ಮಿಸಿತ್ತು. ಈಗ ಪುನೀತ್ ಅವರ 'ರಾಜಕುಮಾರ' ಹಾಗು ಯಶ್ ಅವರ 'ಕೆಜಿಎಫ್' ಸಿನೆಮಾಗಳ ನಿರ್ಮಾಪಕರು ಕೂಡ. 
ಈಮಧ್ಯೆ ಪೃಥ್ವಿ ಅವರ ಚೊಚ್ಚಲ ಚಿತ್ರ 'ನಾನು ಮತ್ತು ವರಲಕ್ಷಿ' ಸಿನೆಮಾವನ್ನು ಜಯಣ್ಣ ಕಂಬೈನ್ಸ್ ವಿತರಿಸುತ್ತಿದ್ದು, ಡಿಸೆಂಬರ್ ೧೬ ಕ್ಕೆ ಬಿಡುಗಡೆಯಾಗಲಿದೆ. ನವೆಂಬರ್ ೨೫ ಕ್ಕೆ ಬಿಡುಗಡೆಯಾಗಬೇಕಿದ್ದರು, ನೋಟು ಹಿಂಪಡೆತ ನಿರ್ಧಾರದಿಂದ ನಗದು ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಇದು ಮುಂದೂಡಲಾಗಿತ್ತು.
ಈ ಸಿನೆಮಾದಲ್ಲಿ ಮಾಳವಿಕಾ ಮೋಹನನ್ ಕೂಡ ಪಾದಾರ್ಪಣೆ ಮಾಡಿದ್ದು ಹಿರಿಯ ನಟರಾದ ಪ್ರಕಾಶ್ ರಾಜ್ ಹಾಗು ಮಧು ನಟಿಸಿದ್ದಾರೆ. ವಿ ಹರಿಕೃಷ್ಣ ಅವರ ಸಂಗೀತ ಮತ್ತು ಪ್ರೀತಾ ಜಯರಾಮ್ ಅವರ ಸಿನೆಮ್ಯಾಟೋಗ್ರಫಿ ಸಿನೆಮಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?