ಕನ್ನಡ ಚಿತ್ರರಂಗದ ದಂತಕತೆ ಡಾ. ರಾಜಕುಮಾರ್ 
ಸಿನಿಮಾ ಸುದ್ದಿ

ನಾಳೆಯಿಂದ ಮೂರು ದಿನಗಳ ಡಾ.ರಾಜಕುಮಾರ್ ರಾಷ್ಟ್ರೀಯ ಉತ್ಸವ

ರಾಯಚೂರು ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗಿರುವ ಸಮಯದಲ್ಲೇ, ಬೆಂಗಳೂರಿನಲ್ಲಿ ಅದೇ ಸಮಯಕ್ಕೆ ಮೂರು ದಿನಗಳ, ಕನ್ನಡ ಚಿತ್ರರಂಗದ ದಂತಕತೆ ಡಾ. ರಾಜಕುಮಾರ್ ರಾಷ್ಟ್ರೀಯ

ಬೆಂಗಳೂರು: ರಾಯಚೂರು ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗಿರುವ ಸಮಯದಲ್ಲೇ, ಬೆಂಗಳೂರಿನಲ್ಲಿ ಅದೇ ಸಮಯಕ್ಕೆ ಮೂರು ದಿನಗಳ, ಕನ್ನಡ ಚಿತ್ರರಂಗದ ದಂತಕತೆ ಡಾ. ರಾಜಕುಮಾರ್ ರಾಷ್ಟ್ರೀಯ ಉತ್ಸವಕ್ಕೆ ರಂಗ ಸಜ್ಜಾಗಿದೆ. 
ಈ ಮೂರು ದಿನಗಳ ರಾಜ್ ಉತ್ಸವ ರವೀಂದ್ರ ಕಲಾಕ್ಷೇತ್ರದಲ್ಲಿ ಡಿಸೆಂಬರ್ ೨ ರಿಂದ ೪ ರವರೆಗೆ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಉದ್ಘಾಟಿಸಲಿದ್ದಾರೆ. ಈ ಉತ್ಸವದ ಮುಖ್ಯಅಂಶಗಳು ಫೋಟೋ ಪ್ರದರ್ಶನ, ಸೆಮಿನಾರ್ ಗಳು, ಡಾ. ರಾಜಕುಮಾರ್ ಅವರ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಡಾ. ರಾಜಕುಮಾರ್ ಸಮಗ್ರ ಚರಿತ್ರೆ ಪುಸ್ತಕದ ಬಗ್ಗೆ ಮಾತುಕತೆ. 
ಡಾ. ರಾಜಕುಮಾರ್ ಬಗ್ಗೆ ಹಿರಿಯ ಚಿತ್ರ ನಿರ್ದೇಶಕ ಟಿ ಎಸ್ ನಾಗಾಭರಣ, ನಟ-ನಿರ್ದೇಶಕ ಪ್ರಕಾಶ್ ರೈ, ಹಾಸ್ಯಗಾರ ಗಂಗಾವತಿ ಪ್ರಾಣೇಶ್ ಸೇರಿದಂತೆ ಹಲವರು ಮಾತನಾಡಲಿದ್ದಾರೆ.  ನಟರಾದ ಆನಂದ್ ಮತ್ತು ರೂಪಿಕಾ ರಾಜಕುಮಾರ್ ಅವರ ಜನಪ್ರಿಯ ಗೀತೆಗಳಿಗೆ ಹೆಜ್ಜೆ ಹಾಕಲಿದ್ದಾರೆ ಮತ್ತು ಶಮಿತಾ ಮಲ್ನಾಡ್ ತಂಡ ಕೂಡ ಉತ್ಸವದಲ್ಲಿ ಪ್ರದರ್ಶನ ನೀಡಲಿದೆ. 
ಈ ಉತ್ಸವದಲ್ಲಿ ರಾಜಕುಮಾರ್ ಅವರ ಕೆಲವು ಕಟ್ಟಾ ಅಭಿಮಾನಿಗಳನ್ನು ಸತ್ಕರಿಸಲು ಕೂಡ ಆಯೋಜಕರು ಯೋಜನೆ ರೂಪಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT