ನಂಜುಂಡಿ ಕಲ್ಯಾಣ ಚಿತ್ರದಲ್ಲಿ ಮಾಲಾಶ್ರೀ-ರಾಘವೇಂದ್ರ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಮತ್ತೆ ನಂಜುಂಡಿ ಕಲ್ಯಾಣ

ಎಂ.ಎಸ್. ರಾಜಶೇಖರ್ ನಿರ್ದೇಶನದ ರಾಘವೇಂದ್ರ ರಾಜ್ ಕುಮಾರ್ ಹಾಗೂ ಮಾಲಾಶ್ರೀ ಅಭಿನಯದ 1989ರಲ್ಲಿ ಬಿಡುಗಡೆಯಾದ...

ಎಂ.ಎಸ್. ರಾಜಶೇಖರ್ ನಿರ್ದೇಶನದ ರಾಘವೇಂದ್ರ ರಾಜ್ ಕುಮಾರ್ ಹಾಗೂ ಮಾಲಾಶ್ರೀ ಅಭಿನಯದ 1989ರಲ್ಲಿ ಬಿಡುಗಡೆಯಾದ ಚಿತ್ರ ನಂಜುಂಡಿ ಕಲ್ಯಾಣ ಸೂಪರ್ ಹಿಟ್ ಆಗಿದ್ದು ಈಗ ಇತಿಹಾಸ. ಚಿತ್ರದ ಹಾಡುಗಳು ಕೂಡ ಇಂದಿಗೂ ಜನಮಾನಸದಿಂದ ಮರೆಯಾಗಿಲ್ಲ.
27 ವರ್ಷಗಳು ಕಳೆದ ನಂತರ ಇಂದು ಅದೇ ಶೀರ್ಷಿಕೆ ಇಟ್ಟುಕೊಂಡು ಹೊಸ ಬಗೆಯ ಚಿತ್ರವನ್ನು ತಯಾರಿಸಲಿದೆ ಮತ್ತೊಂದು ಚಿತ್ರತಂಡ. ಈ ಹೊಸ ನಂಜುಂಡಿ ಕಲ್ಯಾಣ ಚಿತ್ರಕ್ಕೆ ತನುಷ್ ಹೀರೋ. ಮಡಮಕ್ಕಿ ಬಳಿಕ ತನುಷ್ ನಟಿಸುತ್ತಿರುವ ಚಿತ್ರವಿದು. ಚಿತ್ರಕ್ಕೆ ರಾಜೇಂದ್ರ ಕಾರಂತ್ ನಿರ್ದೇಶಕರು. ಈ ಹಿಂದೆ ರಾಜೇಂದ್ರ ಕಾರಂತ್ ಮಂಗನ ಕೈಯಲ್ಲಿ ಮಾಣಿಕ್ಯ ಎಂಬ ಹಾಸ್ಯ ಪ್ರಧಾನ ಚಿತ್ರ ನಿರ್ದೇಶಿಸಿದ್ದರು. ಈಗ ಮತ್ತೊಂದು ಹಾಸ್ಯ ಪ್ರಧಾನ ಚಿತ್ರ ನಿರ್ದೇಶಿಸಲು ಹೊರಟಿದ್ದಾರೆ. 
ಅಮ್ಮ ಮಗನಿಗೆ ಹೆಣ್ಣು ಹುಡುಕಿ ಮದುವೆ ಮಾಡಿಸಲು ಪಡುವ ಸಾಹಸವೇ ನಂಜುಂಡಿ ಕಲ್ಯಾಣ ಚಿತ್ರದ ಸಾರಾಂಶ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿ ಕೂಡ ರಾಜೇಂದ್ರ ಕಾರಂತ್ ಅವರದ್ದೇ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT