ಹರಿವು ಚಲನಚಿತ್ರದಲ್ಲಿ ಸಂಚಾರಿ ವಿಜಯ್ 
ಸಿನಿಮಾ ಸುದ್ದಿ

ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ಆಯ್ಕೆ ಮಾಡದ ದಸರಾ ಚಲನಚಿತ್ರೋತ್ಸವ; ನಿರ್ದೇಶಕ ಅಳಲು

ಮೈಸೂರು ದಸರಾ ಹಬ್ಬದ ವಿಶೇಷವಾಗಿ ಅಕ್ಟೋಬರ್ 1 ರಿಂದ ಅಕ್ಟೋಬರ್ 8 ರವರೆಗೆ ನಡೆಯುತ್ತಿರುವ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿರುವ ಸಿನೆಮಾಗಳ

ಬೆಂಗಳೂರು: ಮೈಸೂರು ದಸರಾ ಹಬ್ಬದ ವಿಶೇಷವಾಗಿ ಅಕ್ಟೋಬರ್ 1 ರಿಂದ ಅಕ್ಟೋಬರ್ 8 ರವರೆಗೆ ನಡೆಯುತ್ತಿರುವ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿರುವ ಸಿನೆಮಾಗಳ ಆಯ್ಕೆ ಪ್ರಕ್ರಿಯೆಯನ್ನು ಭರವಸೆಯ ಯುವ ನಿರ್ದೇಶಕ ಮಂಸೋರೆ ಪ್ರಶ್ನಿಸಿದ್ದಾರೆ. 
2014 ರ ಹಿಂದಿನ ಸಿನೆಮಾಗಳನ್ನು ಕೂಡ ಈ ಚಲನಚಿತ್ರೋತ್ಸವಕ್ಕೆ ಆಯ್ಕೆ ಮಾಡಿದ್ದರು, ಅತ್ಯುತ್ತಮ ಪ್ರಾದೇಶಿಕ ಚಿತ್ರ - 62 ನೇ ರಾಷ್ಟ್ರ ಪ್ರಶಸ್ತಿ ವಿಜೇತ ಸಿನೆಮಾ 'ಹರಿವು' ಆಯ್ಕೆಯಾಗದಿರುವುದರ ಬಗ್ಗೆ ನಿರ್ದೇಶಕ ಮಂಸೋರೆ ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 
ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಳಲು ತೋಡಿಕೊಂಡಿರುವ ನಿರ್ದೇಶಕ ಮಂಸೋರೆ  "ರಾಷ್ಟ್ರ ಪ್ರಶಸ್ತಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅತ್ತ್ಯುತ್ತಮ ಪ್ರಶಸ್ತಿ , ಅದಕ್ಕಿಂತ ಹೆಚ್ಚಾಗಿ ಜನರಿಂದ ಉತ್ತಮ ಪ್ರಶಂಸೆ ಪಡೆದಿದ್ದರೂ ಈ ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ನಮ್ಮ ‘ಹರಿವು’ ಸಿನೆಮಾ ಯಾಕೆ ಆಯ್ಕೆ ಆಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸುವವರು ಯಾರು? ೨೦೧೪ ಕ್ಕು ಹಿಂದಿನ ಸಿನೆಮಾಗಳು ಹಾಗೂ ಅದರ ನಂತರದ ಕನ್ನಡ ಸಿನೆಮಾಗಳು ಆಯ್ಕೆ ಆಗಿರುವಾಗ, ನಮ್ಮ ಸಿನೆಮಾ ಮಾತ್ರ ಯಾಕೆ ಆಯ್ಕೆ ಮಾಡುವವರ ಕಣ್ಣಿಗೆ ಬಿದ್ದಿಲ್ಲ.. ಉತ್ತರ ನಿಗೂಡ.. 
"ಥಿಯೇಟರ್ನಲ್ಲಂತೂ ನಮ್ಮ ಸಿನೆಮಾ ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ.. ಕನಿಷ್ಠ ಇಂತಹ ಉತ್ಸವಗಳ ಮೂಲಕವಾದರೂ ಜನರನ್ನು ತಲುಪೋಣವೆಂದರೆ.. ಇಲ್ಲೂ ಈ ರೀತಿಯಲ್ಲಿ ಕಡೆಗಣಿಸಲ್ಪಟ್ಟರೆ.. (ಅದೂ ಸರ್ಕಾರದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ) ಯಾವ ಭರವಸೆಯ ಮೇಲೆ ಚಿತ್ರರಂಗದಲ್ಲಿ ಮುಂದುವರೆಯುವುದು?" ಎಂದು ಬರೆದಿದ್ದಾರೆ. 
ವಿಮರ್ಶಕರ ಮತ್ತು ಜನರ ಅಪಾರ ಮೆಚ್ಚುಗೆ ಗಳಿಸಿದ್ದ ಈ ಸಿನೆಮಾ ಆಯ್ಕೆ ಸಮಿತಿಯ ಕಣ್ಣು ತಪ್ಪಿದ್ದು ಹೇಗೆ? 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT