ಹರಿವು ಚಲನಚಿತ್ರದಲ್ಲಿ ಸಂಚಾರಿ ವಿಜಯ್ 
ಸಿನಿಮಾ ಸುದ್ದಿ

ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ಆಯ್ಕೆ ಮಾಡದ ದಸರಾ ಚಲನಚಿತ್ರೋತ್ಸವ; ನಿರ್ದೇಶಕ ಅಳಲು

ಮೈಸೂರು ದಸರಾ ಹಬ್ಬದ ವಿಶೇಷವಾಗಿ ಅಕ್ಟೋಬರ್ 1 ರಿಂದ ಅಕ್ಟೋಬರ್ 8 ರವರೆಗೆ ನಡೆಯುತ್ತಿರುವ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿರುವ ಸಿನೆಮಾಗಳ

ಬೆಂಗಳೂರು: ಮೈಸೂರು ದಸರಾ ಹಬ್ಬದ ವಿಶೇಷವಾಗಿ ಅಕ್ಟೋಬರ್ 1 ರಿಂದ ಅಕ್ಟೋಬರ್ 8 ರವರೆಗೆ ನಡೆಯುತ್ತಿರುವ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿರುವ ಸಿನೆಮಾಗಳ ಆಯ್ಕೆ ಪ್ರಕ್ರಿಯೆಯನ್ನು ಭರವಸೆಯ ಯುವ ನಿರ್ದೇಶಕ ಮಂಸೋರೆ ಪ್ರಶ್ನಿಸಿದ್ದಾರೆ. 
2014 ರ ಹಿಂದಿನ ಸಿನೆಮಾಗಳನ್ನು ಕೂಡ ಈ ಚಲನಚಿತ್ರೋತ್ಸವಕ್ಕೆ ಆಯ್ಕೆ ಮಾಡಿದ್ದರು, ಅತ್ಯುತ್ತಮ ಪ್ರಾದೇಶಿಕ ಚಿತ್ರ - 62 ನೇ ರಾಷ್ಟ್ರ ಪ್ರಶಸ್ತಿ ವಿಜೇತ ಸಿನೆಮಾ 'ಹರಿವು' ಆಯ್ಕೆಯಾಗದಿರುವುದರ ಬಗ್ಗೆ ನಿರ್ದೇಶಕ ಮಂಸೋರೆ ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 
ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಳಲು ತೋಡಿಕೊಂಡಿರುವ ನಿರ್ದೇಶಕ ಮಂಸೋರೆ  "ರಾಷ್ಟ್ರ ಪ್ರಶಸ್ತಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅತ್ತ್ಯುತ್ತಮ ಪ್ರಶಸ್ತಿ , ಅದಕ್ಕಿಂತ ಹೆಚ್ಚಾಗಿ ಜನರಿಂದ ಉತ್ತಮ ಪ್ರಶಂಸೆ ಪಡೆದಿದ್ದರೂ ಈ ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ನಮ್ಮ ‘ಹರಿವು’ ಸಿನೆಮಾ ಯಾಕೆ ಆಯ್ಕೆ ಆಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸುವವರು ಯಾರು? ೨೦೧೪ ಕ್ಕು ಹಿಂದಿನ ಸಿನೆಮಾಗಳು ಹಾಗೂ ಅದರ ನಂತರದ ಕನ್ನಡ ಸಿನೆಮಾಗಳು ಆಯ್ಕೆ ಆಗಿರುವಾಗ, ನಮ್ಮ ಸಿನೆಮಾ ಮಾತ್ರ ಯಾಕೆ ಆಯ್ಕೆ ಮಾಡುವವರ ಕಣ್ಣಿಗೆ ಬಿದ್ದಿಲ್ಲ.. ಉತ್ತರ ನಿಗೂಡ.. 
"ಥಿಯೇಟರ್ನಲ್ಲಂತೂ ನಮ್ಮ ಸಿನೆಮಾ ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ.. ಕನಿಷ್ಠ ಇಂತಹ ಉತ್ಸವಗಳ ಮೂಲಕವಾದರೂ ಜನರನ್ನು ತಲುಪೋಣವೆಂದರೆ.. ಇಲ್ಲೂ ಈ ರೀತಿಯಲ್ಲಿ ಕಡೆಗಣಿಸಲ್ಪಟ್ಟರೆ.. (ಅದೂ ಸರ್ಕಾರದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ) ಯಾವ ಭರವಸೆಯ ಮೇಲೆ ಚಿತ್ರರಂಗದಲ್ಲಿ ಮುಂದುವರೆಯುವುದು?" ಎಂದು ಬರೆದಿದ್ದಾರೆ. 
ವಿಮರ್ಶಕರ ಮತ್ತು ಜನರ ಅಪಾರ ಮೆಚ್ಚುಗೆ ಗಳಿಸಿದ್ದ ಈ ಸಿನೆಮಾ ಆಯ್ಕೆ ಸಮಿತಿಯ ಕಣ್ಣು ತಪ್ಪಿದ್ದು ಹೇಗೆ? 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT