ನಟ ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

'ವೀರ ಆಂಜನೇಯ ಪ್ರಸಾದ'ಕ್ಕಾಗಿ ಮತ್ತೆ ಜೊತೆಯಾದ ಪುನೀತ್-ಪವನ್

'ರಣ ವಿಕ್ರಮ'ನ ನಂತರ ನಿರ್ದೇಶಕ ಪವನ್ ಒಡೆಯರ್ ನಟ ಪುನೀತ್ ರಾಜಕುಮಾರ್ ಅವರ ಮತ್ತೊಂದು ಸಿನೆಮಾ ನಿರ್ದೇಶಿಸಲಿದ್ದಾರೆ ಎಂಬ ವದಂತಿಗಳು ಗಾಂಧಿನಗರದಲ್ಲಿ ಸುದ್ದಿ ಮಾಡಿದ್ದವು.

ಬೆಂಗಳೂರು: 'ರಣ ವಿಕ್ರಮ'ನ ನಂತರ ನಿರ್ದೇಶಕ ಪವನ್ ಒಡೆಯರ್ ನಟ ಪುನೀತ್ ರಾಜಕುಮಾರ್ ಅವರ ಮತ್ತೊಂದು ಸಿನೆಮಾ ನಿರ್ದೇಶಿಸಲಿದ್ದಾರೆ ಎಂಬ ವದಂತಿಗಳು ಗಾಂಧಿನಗರದಲ್ಲಿ ಸುದ್ದಿ ಮಾಡಿದ್ದವು. ಈಗ ಆ ಸುದ್ದಿ ಸಾಕಾರವಾಗುತ್ತಿರುವ ಸುಳಿವು ಸಿಕ್ಕಿದೆ. 
ಪುನೀತ್ ಅವರ ಈ ಹೊಸ ಚಿತ್ರದ ಶೀರ್ಷಿಕೆ 'ವೀರ ಆಂಜನೇಯ ಪ್ರಸಾದ' (ವಿಎಪಿ). ಇದು ಗಾಂಧಿನಗರದಲ್ಲಿ ಸಂಚಲನ ಮೂಡಿಸಿದೆ ಎನ್ನುತ್ತವೆ ಮೂಲಗಳು. ಈ ಶೀರ್ಷಿಕೆಗೆ ನಟನ ಅಭಿಮಾನಿಗಳು ಹರ್ಷಗೊಂಡಿದ್ದಾರಂತೆ! 
ಈ ಸಿನೆಮಾದ ಬಗ್ಗೆ ಇನ್ನು ಅಧಿಕೃತ ಹೇಳಿಕೆ ಹೊರಬಿದ್ದಿಲ್ಲವಾದರೂ ಶಿರಿಷಾ ಲಗದಪತಿ ನಿರ್ಮಿಸುತ್ತಿರುವ ಈ ಸಿನೆಮಾದ ಮುಹೂರ್ತ ಅಕ್ಟೋಬರ್ 11 ಕ್ಕೆ ನೆರವೇರಲಿದೆಯಂತೆ. ಮತ್ತು ಸಿನೆಮಾದ ಚಿತ್ರೀಕರಣ ಮುಂದಿನ ವರ್ಷದ ಪ್ರಾರಂಭದಲ್ಲಿ ಶುರುವಾಗುವ ಸಾಧ್ಯತೆಯಿದೆ. 
ಶಿರಿಷಾ ಲಗದಪತಿ ಈ ಹಿಂದೆ ಪವನ್ ಅವರ ತೆಲುಗು ಚಿತ್ರ 'ಪೋಟುಗದು' ಮತ್ತು ಅವರ ಚೊಚ್ಚಲ ಕನ್ನಡ ಚಿತ್ರ 'ಗೋವಿಂದಾಯನಮಃ' ನಿರ್ಮಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT