ಬಾಲಿವುಡ್ ನಟಿ ಕಂಗನಾ 
ಸಿನಿಮಾ ಸುದ್ದಿ

ಕಾರು ಅಪಘಾತ: ಕೂದೆಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ನಟಿ ಕಂಗನಾ

ಸಿಮ್ರನ್ ಚಿತ್ರದ ಚಿತ್ರೀಕರಣಕ್ಕಾಗಿ ಅಮೆರಿಕಾಗೆ ತೆರಳಿರುವ ಬಾಲಿವುಡ್ ನಟಿ ಕಂಗನಾ ಅವರ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ...

ಮುಂಬೈ: ಸಿಮ್ರನ್ ಚಿತ್ರದ ಚಿತ್ರೀಕರಣಕ್ಕಾಗಿ ಅಮೆರಿಕಾಗೆ ತೆರಳಿರುವ ಬಾಲಿವುಡ್ ನಟಿ ಕಂಗನಾ ಅವರ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ನಡೆದಿದೆ.

ನಟಿ ಕಂಗನಾ, ಅಂಗರಕ್ಷಕ ಹಾಗೂ ಸಿಮ್ರನ್ ಚಿತ್ರ ತಂಡದ ಕೆಲವರು ಕಾರಿನಲ್ಲಿ ಹೋಟೆಲ್ ವೊಂದಕ್ಕೆ ಹೋಗುತ್ತಿದ್ದರು. ಕಾರಿನ ಹಿಂದಿನ ಸೀಟಿನಲ್ಲಿ ಕಂಗನಾ ಹಾಗೂ ಚಿತ್ರದ ತಂಡದವರು ಕುಳಿತುಕೊಂಡಿದ್ದರು.

ಕಾರು ಚಾಲನೆ ಮಾಡುತ್ತಿದ್ದಾಗ ಚಾಲಕನಿಗೆ ಇದ್ದಕ್ಕಿಂತೆ ಎಡಬಿಡದಂತೆ ಕೆಮ್ಮು ಬಂದಿದೆ. ಕೆಮ್ಮನ್ನು ನಿಯಂತ್ರಿಸಲು ಚಾಲಕನಿಗೆ ಸಾಧ್ಯವಾಗಿಲ್ಲ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಕೂಡಲೇ ಕಂಗನಾ ಅವರ ಅಂಗರಕ್ಷಕ ಕಾರನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ತಡೆಗೋಡೆಯೊಂದಕ್ಕೆ ಕಾರು ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದವರಿಗೆಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.

ನಟಿ ಕಂಗನಾ ಅವರ ತಲೆಗೆ ಪೆಟ್ಟುಬಿದ್ದಿದ್ದು, ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಮ್ರನ್ ಚಿತ್ರದ ನಿರ್ಮಾಪಕ ಶೈಲೇಶ್ ಆರ್ ಸಿಂಗ್ ಅವರು, ಕೂದಲೆಳೆ ಅಂತರದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಂಗನಾ ಅತ್ಯಂತ ಧೈರ್ಯದ ಹುಡುಗಿಯಾಗಿದ್ದಾಳೆ. ಅಪಘಾತವಾಗಿದ್ದರೂ ಅದಕ್ಕೆ ತಲೆಕೆಡಿಸಿಕೊಳ್ಳದೆ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT