ನೂರೊಂದು ನೆನಪು ಸಿನೆಮಾದ ಪೋಸ್ಟರ್ 
ಸಿನಿಮಾ ಸುದ್ದಿ

'ನೂರೊಂದು ನೆನಪು' ಹೊಸ ಪೋಸ್ಟರ್ ಅನಾವರಣ

ನಿರೀಕ್ಷಿತ ಚಿತ್ರ 'ನೂರೊಂದು ನೆನಪು' ಸಿನೆಮಾದ ಚಿತ್ರೀಕರಣದ ಅನುಭವಗಳನ್ನು ನಿರ್ಮಾಪಕ ಸೂರಜ್ ದೇಸಾಯಿ ಮತ್ತು ಮನೀಶ್ ದೇಸಾಯಿ ಮತ್ತು ಚಿತ್ರತಂಡ ಹಂಚಿಕೊಂಡಿದ್ದಾರೆ.

ಬೆಂಗಳೂರು: ನಿರೀಕ್ಷಿತ ಚಿತ್ರ 'ನೂರೊಂದು ನೆನಪು' ಸಿನೆಮಾದ ಚಿತ್ರೀಕರಣದ ಅನುಭವಗಳನ್ನು ನಿರ್ಮಾಪಕ ಸೂರಜ್ ದೇಸಾಯಿ ಮತ್ತು ಮನೀಶ್ ದೇಸಾಯಿ ಮತ್ತು ಚಿತ್ರತಂಡ ಹಂಚಿಕೊಂಡಿದ್ದಾರೆ. 
ಮೊದಲ ಪತ್ರಿಕಾ ಗೋಷ್ಠಿಯಲ್ಲಿ ಚಿತ್ರತಂಡ, ನಾಯಕ ನಟ ಚೇತನ್, ನಟಿ ಮೇಘನಾ ರಾಜ್, ರಾಜವರ್ಧನ್, ಸುಶ್ಮಿತಾ ಜೋಶಿ ಅರ್ಚನಾ ಇರುವ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ. ಸುಹಾಸ್ ಶಿವಾಲ್ಕರ್ ಅವರಿಂದ ರಚಿತವಾಗಿರುವ ಮರಾಠಿ ಕಾದಂಬರಿ 'ದುನಿಯಾದ್ರಿ'ಯ ದೃಶ್ಯ ಅಡವಳಿಕೆ ಈ ಸಿನೆಮಾ. ಈ ಸಿನೆಮಾದ ಮೂಲಕ ನಿರ್ದೇಶಕನಾಗಿ ಪಾದಾರ್ಪಣೆ ಮಾಡುತ್ತಿರುವ ಕುಮಾರೇಶ್, 80 ರ ದಶಕದ ಕಾಲೇಜು ದಿನಗಳನ್ನು ನೆನಪಿಸುವ ಕಾಲಘಟ್ಟದ ಡ್ರಾಮಾ ಇದು ಎನ್ನುತ್ತಾರೆ. 
ಈ ಚಿತ್ರದಲ್ಲಿ ನಾಯಕನಟನಾಗಿರುವ 'ಆ ದಿನಗಳು' ಖ್ಯಾತಿಯ ಚೇತನ್, ಈ ಸಿನೆಮಾದ ಯುವ ಜೀವನದ ಕಥೆ ನನಗೆ ಬಹಳ ಇಷ್ಟವಾಯಿತು. ಸಾಮಾಜಿಕ ಚಟುವಟಿಕೆಗಳಲ್ಲಿ ಇಷ್ಟು ದಿನ ತೊಡಗಿಸಿಕೊಂಡಿದ್ದು, ಸಿನೆಮಾಗಳಿಂದ ದೂರವುಳಿಯುವಂತೆ ಮಾಡಿತು ಎಂದು ಕೂಡ ತಿಳಿಸುತ್ತಾರೆ. 
ಸಿನೆಮಾದ 70% ಚಿತ್ರೀಕರಣ ಸಂಪೂರ್ಣಗೊಂಡಿದ್ದು ಕೆಲವು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT