ನಿರ್ದೇಶಕ ಅನುರಾಗ್ ಕಶ್ಯಪ್ 
ಸಿನಿಮಾ ಸುದ್ದಿ

ಮೋದಿ ಕ್ಷಮೆಯಾಚಿಸುವಂತೆ ಕೇಳಿಲ್ಲ: ಅನುರಾಗ್ ಕಶ್ಯಪ್ ಸ್ಪಷ್ಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ಷಮೆಯಾಚಿಸುವಂತೆ ನಾನು ಕೇಳಿರಲಿಲ್ಲ ಎಂದು ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಸ್ಪಷ್ಟನೆ ನೀಡಿದ್ದಾರೆ...

ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ಷಮೆಯಾಚಿಸುವಂತೆ ನಾನು ಕೇಳಿರಲಿಲ್ಲ ಎಂದು ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಸ್ಪಷ್ಟನೆ ನೀಡಿದ್ದಾರೆ.

ಪಾಕಿಸ್ತಾನ ನಟರು ನಟಿಸಿರುವ ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸದಿರಲು ಸಿನಿಮಾ ಪ್ರದರ್ಶಕರ ಸಂಘ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರು.

ಇದರಂತೆ ಏ ದಿಲ್ ಹೈ ಮುಷ್ಕಿಲ್ ಪ್ರದರ್ಶನಕ್ಕೆ ನಿಷೇಧ ಹೇರಲಾಗುತ್ತದೆ ಎಂಬುದರ ಕುರಿತಂತೆ ಟ್ವಿಟರ್ ನಲ್ಲಿ ಕಿಡಿಕಾರಿದ್ದ ಕಶ್ಯಪ್ ಅವರು, ಪಾಕಿಸ್ತಾನ ನಟರನ್ನು ಬಳಸಿ ಚಿತ್ರವನ್ನು ತಯಾರು ಮಾಡಿದ ಕಾರಣಕ್ಕೆ ಕಣ್ ಜೋಹರ್ ಕ್ಷಣೆಯಾಚಿಸಬೇಕೆಂದು ಆಗ್ರಹಿಸಲಾಗುತ್ತಿದೆ. ಹಾಗಾದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಖಾಸಗಿ ಕಾರ್ಯಕ್ರಮವೊಂದಕ್ಕೆ ಪಾಕಿಸ್ತಾನಕ್ಕೆ ಹೋಗಿದ್ದರು. ಅವರೂ ಕೂಡ ಕ್ಷಮೆಯಾಚಿಸಬೇಕೆಂದು ಹೇಳಿದ್ದರು.

ಮೋದಿಯವರು ಕ್ಷಮೆಯಾಚಿಸುವಂತೆ ಹೇಳಿದ್ದ ಕಶ್ಯಪ್ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ತಮ್ಮ ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿರುವ ಅವರು, ನನ್ನ ಅಭಿಪ್ರಾಯದಿಂದ ಚಿತ್ರರಂಗದ ಕೆಲ ಸಹೋದ್ಯೋಗಿಗಳಿಗೆ ಸಮಸ್ಯೆಯಾಗುತ್ತಿದ್ದು, ಇದಕ್ಕಾಗಿ ನಾನು ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಟ್ವೀಟ್ ಬಗ್ಗೆಯೇ ನಾನೇ ಸ್ಪಷ್ಟನೆ ನೀಡುತ್ತಿರುವುದು ನಿಜಕ್ಕೂ ದುರಾದೃಷ್ಟಕರ ವಿಚಾರ.

ಸಿನಿಮಾ ರಂಗದ ಮೃದು ಸ್ವಭಾವದಿಂದ ನನಗೆ ಸಾಕಾಗಿದೆ. ಪ್ರತಿಕ್ರಿಯೆ ನೀಡದರೂ ನಮ್ಮನ್ನು ಗುರಿ ಮಾಡಲಾಗುತ್ತದೆ, ನೀಡದೆ ಇದ್ದರೂ ನಮ್ಮನ್ನು ಗುರಿ ಮಾಡಲಾಗುತ್ತದೆ. ಪ್ರತಿಕ್ರಿಯೆ ನೀಡದಿದ್ದರೆ, ಬಾಲಿವುಡ್ ಏಕೆ ಮೌನವಾಗಿದೆ ಎಂದು ಪ್ರಶ್ನಿಸುತ್ತಾರೆ. ಒಂದು ವೇಳೆ ಪ್ರತಿಕ್ರಿಯೆ ನೀಡಿದರೆ ನಮ್ಮನ್ನು ಶತ್ರುಗಳನ್ನಾಗಿ ಮಾಡಲಾಗುತ್ತದೆ.

ನನ್ನ ಟ್ವೀಟ್ ಅರ್ಥ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ಷಮೆಯಾಚಿಸಬೇಕೆಂದಲ್ಲ. ನಾನು ಮೋದಿಯವರು ಕ್ಷಮೆಯಾಚಿಸಬೇಕೆಂದು ಹೇಳಿಲ್ಲ. ಜನರ ತೀರ್ಪಿನಲ್ಲಿರುವ ಸತ್ಯವನ್ನು ಪ್ರಶ್ನಿಸಿದ್ದೆ ಅಷ್ಟೇ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT