ನಟಿ ಅಮೃತ ರಾವ್ 
ಸಿನಿಮಾ ಸುದ್ದಿ

ನಿರ್ದೇಶನಕ್ಕೆ ಹಿಂದಿರುಗಿದ ಗೀತರಚನಕಾರ ನಾಗೇಂದ್ರ ಪ್ರಸಾದ್

ಖ್ಯಾತ ಗೀತರಚನಾಕಾರ, ಸಂಭಾಷಣಕಾರ ನಾಗೇಂದ್ರ ಪ್ರಸಾದ್ ಮತ್ತೆ ನಿರ್ದೇಶಕನ ಟೋಪಿ ತೊಟ್ಟಿದ್ದಾರೆ.

ಬೆಂಗಳೂರು: ಖ್ಯಾತ ಗೀತರಚನಾಕಾರ, ಸಂಭಾಷಣಕಾರ ನಾಗೇಂದ್ರ ಪ್ರಸಾದ್ ಮತ್ತೆ ನಿರ್ದೇಶಕನ ಟೋಪಿ ತೊಟ್ಟಿದ್ದಾರೆ. 
ಇನ್ನು ಹೆಸರಿಡದ ಚಿತ್ರಕ್ಕೆ ಅಕ್ಟೋಬರ್ 17 ರಿಂದಲೇ ಮೌನವಾಗಿ ಕೆಲಸ ಪ್ರಾರಂಭಿಸಿದ್ದಾರೆ ನಾಗೇಂದ್ರ ಪ್ರಸಾದ್. "ನಾನು ಹಾಸನದ ಅರಕಲುಗೂಡಿನಲ್ಲಿ ಚಿತ್ರೀಕರಣ ಪ್ರಾರಂಭಿಸಿದ್ದೇವೆ" ಎನ್ನುವ ನಿರ್ದೇಶಕ ಚಿತ್ರದಲ್ಲಿ ಶುಭ ಪೂಂಜ ನಟಿಸಲಿದ್ದು ಜೊತೆಗೆ ಹಲವು ಹೊಸಬರನ್ನು ಪರಿಚಯಿಸಲಿದ್ದಾರಂತೆ. "ದೀಪಕ್ ಈ ಸಿನೆಮಾದ ಮೂಲಕ ಪಾದಾರ್ಪಣೆ ಮಾಡಲಿದ್ದಾರೆ ಮತ್ತು ಇನ್ನು ಬಿಡುಗಡೆಯಾಗದ 'ಮಂಡ್ಯ ಟು ಮುಂಬೈ' ಸಿನೆಮಾದಲ್ಲಿ ನಟಿಸಿರುವ ಅಮೃತ ರಾವ್ ಕೂಡ ಕಾಣಿಸಿಕೊಳ್ಳಲಿದ್ದಾರೆ" ಎನ್ನುತ್ತಾರೆ ಪ್ರಸಾದ್. ನಿರ್ದೇಶಕ ಕೂಡ ಒಂದು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ. 
'ನಲ್ಲ' ಸಿನೆಮಾದ ಜೊತೆಗೆ ಚೊಚ್ಚಲ ಬಾರಿಗೆ ನಿರ್ದೇಶನಕ್ಕೆ ಇಳಿದ ನಾಗೇಂದ್ರ ಪ್ರಸಾದ್ ನಂತರ 'ಅಂಬಿ' ಹಾಗು 'ಮೇಘವೇ ಮೇಘವೇ' ಸಿನೆಮಾಗಳನ್ನು ನಿರ್ದೇಶಿಸಿದ್ದರು. ರವಿಚಂದ್ರನ್, ರಾಗಿಣಿ ದ್ವಿವೇದಿ ಮತ್ತು ಲಕ್ಷ್ಮಿ ರೈ ನಟಿಸಬೇಕಿದ್ದ 'ಶೃಂಗಾರ' ಎಂಬ ಸಿನೆಮಾವನ್ನು 2014 ರಲ್ಲಿ ನಿರ್ದೇಶಿಸಬೇಕಿತ್ತು ಆದರೆ ಅದು ಕಾಣದ ಕಾರಣಗಳಿಗೆ ಮುಂದುವರೆಯಲೇ ಇಲ್ಲ. 
ನೆನೆಗುದಿಗೆ ಬಿದ್ದ ಯೋಜನೆಗಳ ಬಗ್ಗೆ ಮಾತನಾಡಲು ಇಚ್ಛಿಸದ ನಾಗೇಂದ್ರ ಪ್ರಸಾದ್ "ಇದು ನಾನು ಹಿಂದಿರುಗುತ್ತಿರುವ ಸಿನೆಮಾ. ನಾನು ಕೊನೆಗೆ ನಿರ್ದೇಶಿಸಿದ್ದು 2011 ರಲ್ಲಿ 'ವಿನಾಯಕ ಗೆಳೆಯರ ಬಳಗ'" ಎನ್ನುತ್ತಾರೆ. 
ಪ್ರಸಕ್ತ ಸಿನೆಮಾ ನೈಜ ಕಥೆ ಹೊಂದಿದೆ ಎಂದು ತಿಳಿಸುವ ನಿರ್ದೇಶಕ, ಆರು ಚಿತ್ರಗೀತೆಗಳನ್ನು ಬರೆದು ಅವರೇ ಸಂಗೀತ ನೀಡಲಿದ್ದಾರಂತೆ. ಬೆಂಗಳೂರು, ತೀರ್ಥಹಳ್ಳಿ ಇನ್ನಿತರ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆಯಂತೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT