ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್ 
ಸಿನಿಮಾ ಸುದ್ದಿ

ಕಿರುತೆರೆ ನಟ ಹರೀಶ್ ಅಕಾಲಿಕ ನಿಧನ

ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್ ಅವರು ಮಂಗಳವಾರ ಅಕಾಲಿಕ ಮೃತ್ಯುವಿಗೆ ತುತ್ತಾಗಿದ್ದಾರೆ...

ಬೆಂಗಳೂರು: ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್ ಅವರು ಮಂಗಳವಾರ ಅಕಾಲಿಕ ಮೃತ್ಯುವಿಗೆ ತುತ್ತಾಗಿದ್ದಾರೆ.

ಹಲವು ದಿನಗಳಿಂದಲೂ ಡೆಂಗ್ಯೂ ಮತ್ತು ಕಾಮಾಲೆ ರೋಗದಿಂದ ಬಳಲುತ್ತಿದ್ದ ನಟ ಹರೀಶ್ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರಾವಾಹಿ ಮೂಲಕ ಖ್ಯಾತಿಗಳಿಸಿದ್ದ ಹರೀಶ್ ಅವರು, ಕಲರ್ಸ್ ಕನ್ನಡ ವಾಹನಿಯಲ್ಲಿ ಪ್ರಸಾರವಾಗುತ್ತಿರುವ ಓಂ ಶಕ್ತಿ ಓಂ ಶಾಂತಿ ಧಾರಾವಾಹಿಯಲ್ಲೂ ಪ್ರಮಖ ಪಾತ್ರ ನಿರ್ವಹಿಸುತ್ತಿದ್ದರು.

ಹರೀಶ್ ಅವರ ಅಕಾಲಿಕ ಮೃತ್ಯುವಿಗೆ ಕಿರುತೆರೆ ಕಂಬನಿ ಮಿಡಿದಿದ್ದು, ಕುಟುಂಬಸ್ಥರು ಮೃತ ದೇಹವನ್ನು ಹುಟ್ಟೂರಾದ ಚಿತ್ರದುರ್ಗಕ್ಕೆ ಕೊಂಡೊಯ್ದಿದ್ದಾರೆ. ಆರ್ ಆರ್ ನಗರದಲ್ಲಿ ಹರೀಶ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT