ನಟ-ರಾಜಕಾರಣಿ ಕುಮಾರ್ ಬಂಗಾರಪ್ಪ 
ಸಿನಿಮಾ ಸುದ್ದಿ

'ಚಕ್ರವರ್ತಿ'ಯ ತಾರಾಗಣಕ್ಕೆ ಕುಮಾರ್ ಬಂಗಾರಪ್ಪ ಸೇರ್ಪಡೆ

ಈಗಾಗಲೇ ಹಲವು ಖ್ಯಾತ ನಟರನ್ನು ಒಳಗೊಂಡು ಸದ್ದು ಮಾಡುತ್ತಿರುವ 'ಚಕ್ರವರ್ತಿ' ಚಿತ್ರತಂಡಕ್ಕೆ ಈಗ ನಟ-ರಾಜಕಾರಣಿ ಕುಮಾರ್ ಬಂಗಾರಪ್ಪ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು: ಈಗಾಗಲೇ ಹಲವು ಖ್ಯಾತ ನಟರನ್ನು ಒಳಗೊಂಡು ಸದ್ದು ಮಾಡುತ್ತಿರುವ 'ಚಕ್ರವರ್ತಿ' ಚಿತ್ರತಂಡಕ್ಕೆ ಈಗ ನಟ-ರಾಜಕಾರಣಿ ಕುಮಾರ್ ಬಂಗಾರಪ್ಪ ಸೇರ್ಪಡೆಯಾಗಿದ್ದಾರೆ. 
ದರ್ಶನ್ ನಾಯಕನಟನಾಗಿರುವ ಈ ಚಿತ್ರದಲ್ಲಿ ಕುಮಾರ್ ಬಂಗಾರಪ್ಪ ಖಳನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಕುಮಾರ್ ತಾರಾಗಣಕ್ಕೆ ಸೇರ್ಪಡೆಯಾಗಿರುವುದಕ್ಕೆ ಚೊಚ್ಚಲ ನಿರ್ದೇಶಕ ಚಿಂತನ್ ಹರ್ಷ ವ್ಯಕ್ತಪಡಿಸಿದ್ದಾರೆ. 
"ಅವರ ಪಾತ್ರದ ಬಗ್ಗೆ ಹೆಚ್ಚು ಹೇಳುವುದಿಲ್ಲ ಆದರೆ ಅವರದ್ದು ಪ್ರಮುಖ ಪಾತ್ರ" ಎನ್ನುವ ಚಿಂತನ್ "ಕುಮಾರ್ ಅವರ ಭಾಗದ ಚಿತ್ರೀಕರಣ ಸಂಪೂರ್ಣ ಮಲೇಷಿಯಾದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ ಮಧ್ಯಭಾಗದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ" ಎನ್ನುತ್ತಾರೆ. 
ಕುಮಾರ್ ಬಂಗಾರಪ್ಪ ನಟಿಸಿದ್ದ ಕೊನೆಯ ಚಿತ್ರ 2012 ರ 'ಕೆಳದಿ ಶಿವಪ್ಪ ನಾಯಕ'.
ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ್ ಕೂಡ ಖಳನಾಯಕರಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಸೃಜನ್ ಲೋಕೇಶ್ ಮತ್ತು ಆದಿತ್ಯ ಕೂಡ ನಟರು. ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ಕೆ ಎಸ್ ಚಂದ್ರಶೇಖರ್ ಸಿನೆಮ್ಯಾಟೋಗ್ರಾಫರ್. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT