ಮುಂಗಾರು ಮಳೆ-2 
ಸಿನಿಮಾ ಸುದ್ದಿ

ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರ ಪ್ರದರ್ಶನ ಮಾಡದಿರಲು ವಿತರಕರು ನಿರ್ಧಾರ

ಶಾಂಕ್ ನಿರ್ದೇಶನದ ಮುಂಗಾರು ಮಳೆ-2 ಚಿತ್ರ ಇಂದು ದೇಶಾದ್ಯಂತ ತೆರಕಾಣುತ್ತಿದ್ದು ತಮಿಳುನಾಡಿನಲ್ಲಿ ಚಿತ್ರವನ್ನು ಪ್ರದರ್ಶನ ಮಾಡದಿರಲು ವಿತರಕರು...

ಬೆಂಗಳೂರು: ಶಶಾಂಕ್ ನಿರ್ದೇಶನದ ಮುಂಗಾರು ಮಳೆ-2 ಚಿತ್ರ ಇಂದು ದೇಶಾದ್ಯಂತ ತೆರಕಾಣುತ್ತಿದ್ದು ತಮಿಳುನಾಡಿನಲ್ಲಿ ಚಿತ್ರವನ್ನು ಪ್ರದರ್ಶನ ಮಾಡದಿರಲು ವಿತರಕರು ನಿರ್ಧರಿಸಿದ್ದಾರೆ. 
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರು, ಮತ್ತಷ್ಟು ಬಿಡುವಂತೆ ಇನ್ನಿಲ್ಲದಂತೆ ಒತ್ತಡ ಹಾಕುತ್ತಿರುವ ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರವನ್ನು ಇಂದು ಪ್ರದರ್ಶನ ಮಾಡದಿರಲು ವಿತರಕರು ತೀರ್ಮಾನಿಸಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಶಶಾಂಕ್ ಅವರು, ಕಾವೇರಿಗಾಗಿ ನಿನ್ನೆ ಕರ್ನಾಟಕ ಬಂದ್ ಮಾಡಲಾಗಿತ್ತು. ಇದಕ್ಕೆ ಹಲವು ಕನ್ನಡ ಪರ ಸಂಘಟನೆಗಳು, ಚಿತ್ರರಂಗ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿತರಕರು ಸ್ವಯಂ ಪ್ರೇರಿತರಾಗಿ ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರವನ್ನು ಬಿಡುಗಡೆ ಮಾಡದಿರಲು ತೀರ್ಮಾನಿಸಿದ್ದಾರೆ ಎಂದರು. 
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಬಂದ್ ಹಿನ್ನೆಲೆ ಶುಕ್ರವಾರ ಬದಲಿಗೆ ಶನಿವಾರ ಬಿಡುಗಡೆಯಾಗುತ್ತಿದ್ದು, ಭರ್ಜರಿ ಟ್ರೈಲರ್ ಹಾಗೂ ಹಾಡುಗಳು ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

SCROLL FOR NEXT