ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಪ್ರಧಾನಿ ಭೇಟಿಗೆ ಚಿತ್ರರಂಗ ಚಿಂತನೆ: ಶಿವರಾಜ್ ಕುಮಾರ್

ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬಳಿಗೆ ತೆರಳಲು ಕನ್ನಡ ಚಿತ್ರರಂಗ ಚಿಂತನೆ ನಡೆಸಿದೆ ಎಂದು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್...

ಬೆಂಗಳೂರು: ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬಳಿಗೆ ತೆರಳಲು ಕನ್ನಡ ಚಿತ್ರರಂಗ ಚಿಂತನೆ ನಡೆಸಿದೆ ಎಂದು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ಕಾವೇರಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಂತೆ ಮನವಿ ಮಾಡಲಾಗುವುದು. ಜತೆ ಕೆಆರ್ಎಸ್ ಗೆ ಸಿನಿಮಾದ ಎಲ್ಲಾ ಕಲಾವಿದರು, ತಂತ್ರಜ್ಞರು ಭೇಟಿ ನೀಡುವ ಕುರಿತಂತೆ ನಾಳೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ನಾವು ಕನ್ನಡಿಗರು ಶಾಂತಿಪ್ರಿಯರು, ಶಾಂತ ರೀತಿಯಲ್ಲಿ ಹೋರಾಟ ಮಾಡೋಣ. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟವುಂಟು ಮಾಡುವುದು ಬೇಡ. ನಮಗಾಗಿರುವ ಅನ್ಯಾಯವನ್ನು ಶಾಂತ ರೀತಿಯಲ್ಲಿ ಪ್ರತಿಭಟಿಸುವ ಮೂಲಕ ನ್ಯಾಯ ದೊರಕಿಸಿಕೊಡುವಂತೆ ಹೋರಾಡೋಣ ಎಂದು ಶಿವರಾಜ್ ಕುಮಾರ್ ಜನತೆಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: ವ್ಯಾಪಾರ ಏಕೀಕರಣಕ್ಕೆ ಒತ್ತಾಸೆ ಕೋರಿದ ಪ್ರಧಾನಿ ಮೋದಿ ಮೊದಲ ದಿನ ಹೇಳಿದ್ದೇನು?

ಜೈಲಿನಲ್ಲಿದ್ದರೂ ಹಳೆಯ ಚಾಳಿ ಬಿಡದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈವ್ ನೋಡಿ ಪೊಲೀಸರು ಶಾಕ್!

ಪತ್ರಕರ್ತ ಜಿ. ಮಹಂತೇಶ್ ಗೆ ಜೀವ ಬೆದರಿಕೆ: FIR ದಾಖಲು!

ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಹೋರಾಟ: ಆಪ್ತ ಸಹಾಯಕನ ಮನೆ ಮೇಲೆ ED ದಾಳಿ; ಪಕ್ಷಕ್ಕೆ ಮುಜುಗರ ತಪ್ಪಿಸಲು ರಾಜಿನಾಮೆ- ಹರೀಶ್ ರಾವತ್

ಬೆಂಗಳೂರಿನ ಗುಂಡಿ ಮುಚ್ಚಲು 'ಜೆಟ್ ಪ್ಯಾಚರ್': ಪ್ರಾಯೋಗಿಕ ಕಾರ್ಯಾಚರಣೆ!