ಮಹೇಂದ್ರ ಸಿಂಗ್ ಧೋನಿ-ಸುಶಾಂತ್ ಸಿಂಗ್ ರಜಪೂತ್ 
ಸಿನಿಮಾ ಸುದ್ದಿ

ಬಯೋಪಿಕ್ ನನ್ನನ್ನು ವೈಭವೀಕರಿಸುವುದಿಲ್ಲ; ನನ್ನ ಪಯಣ ತೋರಿಸಲಿದೆ: ಧೋನಿ

ನನ್ನನ್ನು ವೈಭವೀಕರಿಸಬೇಡಿ ಆದರೆ ನಾನು ನನ್ನ ಪಯಣದಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಪರಿಣಾಮಕಾರಿಯಾಗಿ ತೋರಿಸಿ ಎಂದು ಜನಪ್ರಿಯ ಭಾರತೀಯ ಕ್ರಿಕೆಟ್ ತಂಡದ ನಾಯಕ

ನ್ಯೂಯಾರ್ಕ್: ನನ್ನನ್ನು ವೈಭವೀಕರಿಸಬೇಡಿ ಆದರೆ ನಾನು ನನ್ನ ಪಯಣದಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಪರಿಣಾಮಕಾರಿಯಾಗಿ ತೋರಿಸಿ ಎಂದು ಜನಪ್ರಿಯ ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 'ಎಂಎಸ್ ಧೋನಿ- ದ ಆನ್ ಟೋಲ್ಡ್ ಸ್ಟೋರಿ' ಚಿತ್ರೀಕರಣಕ್ಕೂ ಮುಂಚಿತವಾಗಿ ನಿರ್ದೇಹಕ ನೀರಜ್ ಪಾಂಡೆ ಅವರಿಗೆ ಹೇಳಿದ ಮಾತುಗಳು. 
ಸೆಪ್ಟೆಂಬರ್ 30 ರಂದು ಬಿಡುಗಡೆಯಾಗಲಿರುವ ಈ ಸಿನೆಮಾದ ಪ್ರಚಾರಕ್ಕಾಗಿ ಅಮೆರಿಕಾದಲ್ಲಿದ್ದ ಧೋನಿ, ಅವರ ಪತ್ನಿ ಸಾಕ್ಷಿ ಮತ್ತು ನಿರ್ಮಾಪಕ ಅರುಣ್ ಪಾಂಡೆ ಮಾಧ್ಯಮಗಳೊಂದಿಗೆ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. 
"ನಾನು ಪಾಂಡೆ (ನಿರ್ದೇಶಕ ನೀರಜ್) ಅವರಿಗೆ ಹೇಳಿದ ಒಂದೇ ಮಾತೆಂದರೆ ಸಿನೆಮಾ ನನ್ನನ್ನು ವೈಭವೀಕರಿಸಬಾರದು. ಇದು ವೃತ್ತಿಪರ ಕ್ರೀಡಾಪಟುವೊಬ್ಬನ ಪಯಣ ಮತ್ತು ಅದನ್ನಷ್ಟೇ ತೋರಿಸಬೇಕು" ಎಂದು ಧೋನಿ ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ವರದಿಗಾಗರಿಗೆ ಹೇಳಿದ್ದಾರೆ. 
ವಾಸ್ತವದಲ್ಲಿ ಬದುಕುವ ಈ ಕ್ರೀಡಾಪಟುವಿಗೆ ತಮ್ಮ ಜೀವನದ ಹಿಂದಿನ ಕಥೆಯನ್ನು ಪಾಂಡೆ ಅವರಿಗೆ ನೆನಪಿಸಿಕೊಂಡು ವಿವರಿಸುವುದಕ್ಕೆ ಕಷ್ಟ ಆಯಿತಂತೆ. 
ಸಂಕಲನಗೊಂಡಿರದ ಸಿನೆಮಾವನ್ನು ಮೊದಲ ಬಾರಿಗೆ ನೋಡಿದಾಗ, ತಮ್ಮ ಬಾಲ್ಯದ ಕಾಲಕ್ಕೆ ಸಿನೆಮಾ ಕೊಂಡೊಯ್ದಿತು ಎನ್ನುವ ಧೋನಿ "ಅವೆಲ್ಲವೂ ನನ್ನ ನೆನಪಿಗೆ ಮತ್ತೆ ಬಂದವು... ನಾನು ಆಗ ಬದುಕಿದ್ದ ರೀತಿ, ನನ್ನ ಶಾಲೆ, ನಾನು ಆಟವಾಡುತ್ತಿದ್ದುದು. ನಾನು ಒಂದು ಕ್ಷಣ ಅವಾಕ್ಕಾದೆ" ಎದು ಸಾಮಾನ್ಯವಾಗಿ ಎಂದಿಗೂ ಕ್ರೀಡಾಂಗಣದಲ್ಲಿ ತಮ್ಮ ಭಾವನೆಗಳನ್ನು ಪ್ರದರ್ಶಿಸದ ಧೋನಿ ಹೇಳಿದ್ದಾರೆ. 
ಸಿನೆಮಾದಲ್ಲಿ ಧೋನಿ ಪಾತ್ರ ನಿರ್ವಹಿಸಿರುವ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಮನಸಾರೆ ಹೊಗಳಿರುವ ಧೋನಿ, ಅವರು ಅದ್ಭುತ ನಟ ಎಂದಿದ್ದು, ಅವರು ಸಿನೆಮಾಗಿ ಎಷ್ಟು ಕಷ್ಟ ಪಟ್ಟಿದ್ದಾರೆ ಎಂದರೆ ತಾರೆಯರ ಕ್ರಿಕೆಟ್ ಆಟದಲ್ಲಿ ಇವರು ಅತ್ಯುತ್ತಮ ಕ್ರಿಕೆಟರ್ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT