ಸೆಲ್ಫೀ ತೆಗೆಯಲು ಯತ್ನಿಸಿದ ಅಭಿಮಾನಿಯನ್ನು ದೂರತಳ್ಳಿದ ನಟ ರಿಷಿ ಕಪೂರ್: ವೈರಲ್ ಆಯ್ತು ವಿಡಿಯೋ 
ಸಿನಿಮಾ ಸುದ್ದಿ

ಗಣಪತಿ ವಿಸರ್ಜನೆ ವೇಳೆ ಪತ್ರಕರ್ತನಿಗೆ ಕಪಾಳಮೋಕ್ಷ ಮಾಡಿದ ನಟ ರಣಧೀರ್ ಕಪೂರ್

ಗಣೇಶ ಮೂರ್ತಿ ವಿಸರ್ಜನೆ ವೇಳೆ ಹೇಳಿಕೆ ದಾಖಲಿಸಿಕೊಳ್ಳಲು ಹೋಗಿದ್ದ ಪತ್ರಕನೊಬ್ಬನಿಗೆ ನಟ ರಣಧೀರ್ ಕಪೂರ್ ಅವರು ಕಪಾಳಮೋಕ್ಷ ಮಾಡಿರುವ ವಿಡಿಯೋವೊಂದು...

ಮುಂಬೈ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಹೇಳಿಕೆ ದಾಖಲಿಸಿಕೊಳ್ಳಲು ಹೋಗಿದ್ದ ಪತ್ರಕನೊಬ್ಬನಿಗೆ ನಟ ರಣಧೀರ್ ಕಪೂರ್ ಅವರು ಕಪಾಳಮೋಕ್ಷ ಮಾಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೆಂಟ್ರಲ್ ಮುಂಬೈನ ದಾದರ್'ನ ಶಿವಾಜಿ ಪಾರ್ಕ್ ಬಳಿಯಿರುವ ಆರ್.ಕೆ. ಸ್ಟುಡಿಯೋದಲ್ಲಿ ಗಣೇಶ ಮೂರ್ತಿಯನ್ನು ಕೂರಿಸಿ ಅದ್ಧೂರಿಯಾಗಿ ಪೂಜಾ ಕೈಂಕರ್ಯಗಳನ್ನು ಮಾಡಲಾಗಿತ್ತು. ಇದರಂತೆ ನಿನ್ನೆ ಗಣಪತಿ ಮೂರ್ತಿ ವಿಸರ್ಜನೆ ಮಾಡುವ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿತ್ತು. ಮೂರ್ತಿ ವಿಸರ್ಜನಾ ಕಾರ್ಯಕ್ರಮಕ್ಕೆ ರಣಧೀರ್ ಕಪೂರ್, ರಿಷಿ ಕಪೂರ್, ರಾಜೀವ್ ಮತ್ತು ರಣಬೀರ್ ಕಪೂರ್ ಹಾಜರಿದ್ದರು.

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ವಿಡಿಯೋದಲ್ಲಿ, ನಟ ರಣಧೀರ್ ಕಪೂರ್ ಹಾಗೂ ಅವರ ಸಹೋದರ ರಿಷಿ ಕಪೂರ್ ಇಬ್ಬರೂ ಗಣಪತಿ ಮೂರ್ತಿ ವಿಸರ್ಜನೆ ಮಾಡುವ ಪೂಜಾ ಪ್ರಕ್ರಿಯೆಯಲ್ಲಿ ತೊಡಗಿದ್ದರು. ಈ ವೇಳೆ ಪತ್ರಕರ್ತನೊಬ್ಬ ರಣಧೀರ್ ಕಪೂರ್ ಅವರ ಹೇಳಿಕೆಯನ್ನು ಕೇಳಲು ಹೋದಾಗ ಪತ್ರಕರ್ತನ ಕೆನ್ನೆಗೆ ಬಾರಿಸಿದ್ದಾರೆ. ಇದರಂತೆ ರಿಷಿ ಕಪೂರ್ ಕೂಡ ಸೆಲ್ಫೀ ತೆಗೆದುಕೊಳ್ಳಲು ಅನುಮತಿ ಕೇಳಿದ ಅಭಿಮಾನಿಯನ್ನು ದೂರ ತಳ್ಳಿ ಕಾರಿನಲ್ಲಿ ಹೋಗಿದ್ದಾರೆ.

ಮೂರ್ತಿ ವಿಸರ್ಜನೆ ವೇಳೆ ಪತ್ರಕರ್ತರು ಕಪೂರ್ ಕುಟುಂಬದ ಫೋಟೋ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೆ, ಹೇಳಿಕೆಯನ್ನು ನೀಡುವಂತೆ ಕೇಳಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ರಿಷಿ ಕಪೂರ್ ಅವರು ಟಿವಿ ಮಾಧ್ಯಮದವರನ್ನು ದೂರ ತಳ್ಳಿದ್ದಾರೆ. ಅಲ್ಲದೆ, ರಣಧೀರ್ ಕಪೂರ್ ಅವರು ಇಬ್ಬರು ಛಾಯಾಗ್ರಾಹಕರಿಗೆ ಹೊಡೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ನಟ ರಣಧೀರ್ ಕಪೂರ್ ಅವರಿಂದ ಹೊಡೆತ ತಿಂದ ವ್ಯಕ್ತಿ ಪತ್ರಕರ್ತನೇ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT