ಮಾಳವಿಕ ಅವಿನಾಶ್ 
ಸಿನಿಮಾ ಸುದ್ದಿ

ತಮಿಳಿನ ಅನ್ನಿ ಧಾರಾವಾಹಿಯನ್ನು ಹೊಗಳಿ, ಕನ್ನಡಿಗರ ಟೀಕೆಗೆ ಗುರಿಯಾದ ಮಾಳವಿಕ ಅವಿನಾಶ್

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ನೀಡಿದ್ದ ಬಂದ್ ಗೆ ಬೆಂಬಲ ಸೂಚಿಸಿದ್ದ ಚಿತ್ರರಂಗದ ಪ್ರತಿಭಟನೆಯಲ್ಲಿ...

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ನೀಡಿದ್ದ ಬಂದ್ ಗೆ ಬೆಂಬಲ ಸೂಚಿಸಿದ್ದ ಚಿತ್ರರಂಗದ ಪ್ರತಿಭಟನೆಯಲ್ಲಿ ಭಾಗವಹಿಸಿ ತಮಿಳುನಾಡು ವಿರುದ್ಧ ಪ್ರತಿಭಟಿಸಿದ್ದ ನಟಿ ಮಾಳವಿಕ ಅವಿನಾಶ್ ಇದೀಗ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರನ್ನು ಹೊಗಳಿ ಇದೀಗ ವಿವಾದಕ್ಕೆ ಗುರಿಯಾಗಿದ್ದಾರೆ.

ತಮಿಳಿನಲ್ಲಿ ಪ್ರಸಾರವಾಗುತ್ತಿರುವ ಅನ್ನಿ ಧಾರಾವಾಹಿಯಲ್ಲಿ ತಮ್ಮ ಪಾತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿದ್ದರು. ಈ ಧಾರಾವಾಹಿಯನ್ನು ಜಯಲಲಿತಾ ಅವರು ತಪ್ಪದೆ ನೋಡುತ್ತಾರೆ. ಅಲ್ಲದೆ, ಲೈವ್ ನೋಡಲು ಆಗದಿದ್ದರೂ ವಿಎಚ್ಎಸ್ ತರಿಸಿಕೊಂಡು ನೋಡುತ್ತಾರೆ.

ಅನ್ನಿ ಧಾರಾವಾಹಿ ಮೂಲಕ ತಮಿಳರ ಹೃದಯದಲ್ಲಿ ಸ್ಥಾನ ಪಡೆಯುತ್ತೇನೆ ಎನ್ನುವ ವಿಶ್ವಾಸ ತಮಗಿದೆ ಎಂದು ಸ್ಟೇಟಸ್ ಆಗಿದ್ದರು. ಇದಕ್ಕೆ ಕನ್ನಡಿಗರಿಂದ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದಿದ್ದರಿಂದ ಮಾಳವಿಕಾ ಕನ್ನಡಿಗರ ಕ್ಷಮೆ ಕೇಳುತ್ತೇನೆ. ಫೇಸ್ ಬುಕ್ ನಲ್ಲಿ ಹಾಕಿರುವ ಸ್ಟೇಟಸ್ ಡಿಲೀಟ್ ಮಾಡುತ್ತೇನೆ ನನ್ನು ತಪ್ಪಾಯಿತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT