ಸಿನಿಮಾ ಸುದ್ದಿ

ಕಿರುತೆರೆ ಧಾರಾವಾಹಿ 'ಗಿರಿಜಾ ಕಲ್ಯಾಣ'ದ ವಿಶಿಷ್ಟ ಪಾತ್ರದಲ್ಲಿ ಗೋಧಿ ಬಣ್ಣ..'ದ ವಸಿಷ್ಠ

Guruprasad Narayana
ಬೆಂಗಳೂರು: ಹೇಮಂತ್ ರಾವ್ ನಿರ್ದೇಶನದ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನೆಮಾದಲ್ಲಿ ವಿಶಿಷ್ಟ ಖಳನಾಯಕನ ಪಾತ್ರ ಮಾಡಿ ಗಮನ ಸೆಳೆದಿದ್ದ ವಸಿಷ್ಠ ಸಿಂಹ ಅವರಿಗೆ ಹಲವಾರು ಅವಕಾಶಗಳು ಸಹಜವಾಗಿ ಹುಡುಕಿಬರುತ್ತಿವೆ. ಈಗ ಅವರು ಕಲರ್ಸ್ ಸೂಪರ್ ವಾಹಿನಿಯಲ್ಲಿ ಮೂಡಿ ಬರುತ್ತಿರುವ 'ಗಿರಿಜಾ ಕಲ್ಯಾಣ' ಧಾರಾವಾಹಿಯಲ್ಲಿ ನಟಿಸಲಿದ್ದಾರೆ. 
ಭರವಸೆಯ ನಟ ವಸಿಷ್ಠ ಅವರು ಸೂರಿ ನಿರ್ದೇಶನದ 'ಟಗರು' ಸಿನೆಮಾದಲ್ಲಿ ಕೂಡ ಶಿವರಾಜ್ ಕುಮಾರ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಅಲ್ಲಿ ಕೂಡ ಖಳನಾಯಕರಾನಾಗಿ ಕಾಣಿಸಿಕೊಳ್ಳಲಿದ್ದಾರೆ.
ಈಗ ಆಸಕ್ತಿದಾಯಕ ಬೆಳವಣಿಗೆಯೊಂದರಲ್ಲಿ ಬಹುಮುಖಿ ನಟ ವಸಿಷ್ಠ ಕಿರುತೆರೆ ಧಾರಾವಾಹಿ 'ಗಿರಿಜಾ ಕಲ್ಯಾಣ'ದಲ್ಲಿ 'ಭೈರವಗಿರಿ ಬಾಬಾ' ಆಗಿ ಬರಲಿದ್ದಾರೆ. ಕಲರ್ಸ್ ಸೂಪರ್ ಕನ್ನಡ ಮನರಂಜನಾ ವಾಹಿನಿಯಲ್ಲಿ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 9:30 ಕ್ಕೆ ಈ ಧಾರಾವಾಹಿ ಮೂಡಿಬರುತ್ತದೆ. 
'ಬಾಹುಬಲಿ' ಖ್ಯಾತಿಯ ಸಿನೆಮಾ ನಿರ್ಮಾಣ ಸಂಸ್ಥೆ ಆರ್ಕಾ ಮೀಡಿಯಾ ನಿರ್ಮಿಸುತ್ತಿರುವ ಈ ಧಾರಾವಾಹಿಯ ನಿರ್ದೇಶಕ ನವೀನ್ ಕೃಷ್ಣ.
SCROLL FOR NEXT