'ಗಿರಿಜಾ ಕಲ್ಯಾಣ'ದ ವಿಶಿಷ್ಟ ಪಾತ್ರದಲ್ಲಿ ಗೋಧಿ ಬಣ್ಣ..'ದ ವಸಿಷ್ಠ 
ಸಿನಿಮಾ ಸುದ್ದಿ

ಕಿರುತೆರೆ ಧಾರಾವಾಹಿ 'ಗಿರಿಜಾ ಕಲ್ಯಾಣ'ದ ವಿಶಿಷ್ಟ ಪಾತ್ರದಲ್ಲಿ ಗೋಧಿ ಬಣ್ಣ..'ದ ವಸಿಷ್ಠ

ಹೇಮಂತ್ ರಾವ್ ನಿರ್ದೇಶನದ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನೆಮಾದಲ್ಲಿ ವಿಶಿಷ್ಟ ಖಳನಾಯಕನ ಪಾತ್ರ ಮಾಡಿ ಗಮನ ಸೆಳೆದಿದ್ದ ವಸಿಷ್ಠ ಸಿಂಹ ಅವರಿಗೆ ಹಲವಾರು ಅವಕಾಶಗಳು ಸಹಜವಾಗಿ

ಬೆಂಗಳೂರು: ಹೇಮಂತ್ ರಾವ್ ನಿರ್ದೇಶನದ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನೆಮಾದಲ್ಲಿ ವಿಶಿಷ್ಟ ಖಳನಾಯಕನ ಪಾತ್ರ ಮಾಡಿ ಗಮನ ಸೆಳೆದಿದ್ದ ವಸಿಷ್ಠ ಸಿಂಹ ಅವರಿಗೆ ಹಲವಾರು ಅವಕಾಶಗಳು ಸಹಜವಾಗಿ ಹುಡುಕಿಬರುತ್ತಿವೆ. ಈಗ ಅವರು ಕಲರ್ಸ್ ಸೂಪರ್ ವಾಹಿನಿಯಲ್ಲಿ ಮೂಡಿ ಬರುತ್ತಿರುವ 'ಗಿರಿಜಾ ಕಲ್ಯಾಣ' ಧಾರಾವಾಹಿಯಲ್ಲಿ ನಟಿಸಲಿದ್ದಾರೆ. 
ಭರವಸೆಯ ನಟ ವಸಿಷ್ಠ ಅವರು ಸೂರಿ ನಿರ್ದೇಶನದ 'ಟಗರು' ಸಿನೆಮಾದಲ್ಲಿ ಕೂಡ ಶಿವರಾಜ್ ಕುಮಾರ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಅಲ್ಲಿ ಕೂಡ ಖಳನಾಯಕರಾನಾಗಿ ಕಾಣಿಸಿಕೊಳ್ಳಲಿದ್ದಾರೆ.
ಈಗ ಆಸಕ್ತಿದಾಯಕ ಬೆಳವಣಿಗೆಯೊಂದರಲ್ಲಿ ಬಹುಮುಖಿ ನಟ ವಸಿಷ್ಠ ಕಿರುತೆರೆ ಧಾರಾವಾಹಿ 'ಗಿರಿಜಾ ಕಲ್ಯಾಣ'ದಲ್ಲಿ 'ಭೈರವಗಿರಿ ಬಾಬಾ' ಆಗಿ ಬರಲಿದ್ದಾರೆ. ಕಲರ್ಸ್ ಸೂಪರ್ ಕನ್ನಡ ಮನರಂಜನಾ ವಾಹಿನಿಯಲ್ಲಿ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 9:30 ಕ್ಕೆ ಈ ಧಾರಾವಾಹಿ ಮೂಡಿಬರುತ್ತದೆ. 
'ಬಾಹುಬಲಿ' ಖ್ಯಾತಿಯ ಸಿನೆಮಾ ನಿರ್ಮಾಣ ಸಂಸ್ಥೆ ಆರ್ಕಾ ಮೀಡಿಯಾ ನಿರ್ಮಿಸುತ್ತಿರುವ ಈ ಧಾರಾವಾಹಿಯ ನಿರ್ದೇಶಕ ನವೀನ್ ಕೃಷ್ಣ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT