ಜಾಗ್ವಾರ್ ನಲ್ಲಿ ನಿಖಿಲ್ ಜೊತೆ ಹೆಜ್ಜೆ ಹಾಕಿದ ತಮನ್ನಾ 
ಸಿನಿಮಾ ಸುದ್ದಿ

ನಿಖಿಲ್ ಕುಮಾರ್ 'ಜಾಗ್ವಾರ್' ಪ್ರಚಾರ ಮಾಡಲಿರುವ ತಮನ್ನಾ

ನಿಖಿಲ್ ಕುಮಾರ್ ಅವರ ಚೊಚ್ಚಲ ಚಿತ್ರ 'ಜಾಗ್ವಾರ್' ಸಿನೆಮಾಗೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪಾತ್ರ ನೀಡಿದ್ದು, ಕನ್ನಡ ಮತ್ತು ತೆಲುಗು ಭಾಷೆಯ ಎರಡೂ ಅವತಾರಿಣಿಕೆಗಳು ಮೊದಲೇ ನಿಗದಿಯಾದಂತೆ

ಬೆಂಗಳೂರು: ನಿಖಿಲ್ ಕುಮಾರ್ ಅವರ ಚೊಚ್ಚಲ ಚಿತ್ರ 'ಜಾಗ್ವಾರ್' ಸಿನೆಮಾಗೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪಾತ್ರ ನೀಡಿದ್ದು, ಕನ್ನಡ ಮತ್ತು ತೆಲುಗು ಭಾಷೆಯ ಎರಡೂ ಅವತಾರಿಣಿಕೆಗಳು ಮೊದಲೇ ನಿಗದಿಯಾದಂತೆ ಅಕ್ಟೋಬರ್ 6 ಕ್ಕೆ ಬಿಡುಗಡೆ ಮಾಡಲು ನಿರ್ಮಾಪಕ-ರಾಜಕಾರಣಿ ಎಚ್ ಡಿ ಕುಮಾರಸ್ವಾಮಿ ಸಿದ್ಧರಾಗಿದ್ದಾರೆ. 
"ಹಾಲಿವುಡ್ ಮಾನದಂಡದಲ್ಲಿ ತಮ್ಮ ಪುತ್ರ ನಿಖಿಲ್ ನಟಿಸಿರುವ ಈ ಸಿನೆಮಾ ಚಿತ್ರೀಕರಣಗೊಂಡಿರುವುದಕ್ಕೆ ನಿರ್ಮಾಪಕ ಬಹಳ ಸಂತಸದಿಂದಿದ್ದು, ಸಿನೆಮಾ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಅವರೇ ವೈಯಕ್ತಿಕವಾಗಿ ಸಿನೆಮಾ ಬಿಡುಗಡೆಯ ಹೊಣೆ ಹೊತ್ತಿದ್ದಾರೆ. ವಿಶ್ವದಾದ್ಯಂತ 1000 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಈ ಸಿನೆಮಾ ಬಿಡುಗಡೆಯಾಗುವ ಸಾಧ್ಯತೆ ಇದೆ" ಎಂದು ನಿರ್ಮಾಣ ತಂಡದ ಸದಸ್ಯರೊಬ್ಬರು ಹೇಳಿದ್ದಾರೆ. ಕುಮಾರಸ್ವಾಮಿಯವರು ಈ ಸಿನೆಮಾದ ಚಿತ್ರೀಕರಣದ ಮೊದಲ ಹಂತದಿಂದಲೂ ಎಲ್ಲ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವುದು ವಿಶೇಷ. 
ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿರುವ 'ಜಾಗ್ವಾರ್' ಬಿಡುಗಡೆಗೆ ಸನಿಹವಾಗುತ್ತಿರುವ ಸಮಯದಲ್ಲಿ ಪ್ರಚಾರವನ್ನು ಹೆಚ್ಚಿಸಲು ನಿರ್ಮಾಣತಂಡ ಅಣಿಯಾಗಿದೆ. ಚಲನಚಿತ್ರ ಪ್ರಚಾರಕ್ಕಾಗಿ ಅಕ್ಟೋಬರ್ 2 ಮತ್ತು 3 ರಂದು ತಮನ್ನಾ ಬೆಂಗಳೂರಿಗೆ ಬರಲಿದ್ದಾರೆ ಎಂದು ತಿಳಿದುಬಂದೆ. 
ಈ ಸಿನೆಮಾದಲ್ಲಿ ಅತಿಥಿ ನಟಿಯಾಗಿ ಕಾಣಿಸಿಕೊಂಡಿರುವ ನಟಿ ತಮನ್ನಾ ಸಿನೆಮಾ ನೋಡಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರಂತೆ. ಹಾಗೆಯೇ ಸಿನೆಮಾ ಪ್ರಚಾರಕ್ಕೂ ಉತ್ಸಾಹ ತೋರಿದ್ದಾರೆ. ಚೊಚ್ಚಲ ಸಿನಿಮಾದಲ್ಲೇ ನಿಖಿಲ್ ಅಭಿನಯವನ್ನು ಮೆಚ್ಚಿರುವ ತಮನ್ನಾ ಅವರೆದುರು ಮುಂದಿನ ಸಿನೆಮಾಗಳಲ್ಲಿ ನಟಿಸುವ ಆಸಕ್ತಿ ತೋರಿದ್ದಾರಂತೆ. 
ಬಾಹುಬಲಿ ನಿರ್ದೇಶಕ್ ಎಸ್ ಎಸ್ ರಾಜಮೌಳಿ ಅವರ ತಂದೆ ವಿಜೇಂದ್ರ ಪ್ರಸಾದ್ ಈ ಸಿನೆಮಾಗೆ ಚಿತ್ರಕಥೆ ಬರೆದಿದ್ದು, ಎ ಮಹಾದೇವ ನಿರ್ದೇಶಕ. ದೀಪ್ತಿ ಸಾಟಿ ನಾಯಕನಟಿಯಾಗಿದ್ದು, ಜಗಪತಿ ಬಾಬು, ಅವಿನಾಶ್, ರಮ್ಯಾ ಕೃಷ್ಣ ಮತ್ತು ಸಾಧುಕೋಕಿಲಾ ತಾರಾಗಣದ ಭಾಗವಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT