ನಟ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಅಶೋಕ್ ನಿರ್ದೇಶನದಲ್ಲಿ ಶಿವರಾಜಕುಮಾರ್ ಮುಂದಿನ ಚಿತ್ರ

ಈಗಾಗಲೇ ಹಲವು ಸಿನೆಮಾಗಳ ನಡುವೆ ಬ್ಯುಸಿಯಾಗಿರುವ ಜನಪ್ರಿಯ ನಟ ಶಿವರಾಜ್ ಕುಮಾರ್ ಅವರ ಮುಂದಿನ ಸಿನೆಮಾ ಘೋಷಣೆಯಾಗಿದೆ. ಈ ಸಿನೆಮಾ ನಿರ್ದೇಶಕನ ಸಂಬಂಧ ದಕ್ಷಿಣ ಭಾರತದ

ಬೆಂಗಳೂರು: ಈಗಾಗಲೇ ಹಲವು ಸಿನೆಮಾಗಳ ನಡುವೆ ಬ್ಯುಸಿಯಾಗಿರುವ ಜನಪ್ರಿಯ ನಟ ಶಿವರಾಜ್ ಕುಮಾರ್ ಅವರ ಮುಂದಿನ ಸಿನೆಮಾ ಘೋಷಣೆಯಾಗಿದೆ. ಈ ಸಿನೆಮಾ ನಿರ್ದೇಶಕನ ಸಂಬಂಧ ದಕ್ಷಿಣ ಭಾರತದ ಖ್ಯಾತ ನಟ ಕಮಲ ಹಾಸನ್ ಅವರೊಂದಿಗೆ ಬೆಸೆದುಕೊಂಡಿರುವುದರಿಂದ ಈ ಸಿನೆಮಾ ಕುತೂಹಲ ಕೆರಳಿಸಿದೆ. 
ಎನ್ ಎಸ್ ರಾಜಕುಮಾರ್ ನಿರ್ಮಿಸುತ್ತಿರುವ ಈ ಸಿನೆಮಾದಲ್ಲಿ ಕಿಶೋರ್ ಜೊತೆಗೆ ಶಿವರಾಜ್ ಕುಮಾರ್ ನಟಿಸಲಿದ್ದಾರೆ. ಈ ಸಿನೆಮಾವನ್ನು ಅಶೋಕ್ ನಿರ್ದೇಶಿಸಲಿದ್ದಾರೆ. ಇವರು ಕಮಲ ಹಾಸನ್ ಅವರ ಹಲವು ಸಿನೆಮಾಗಳಿಗೆ ಸಹ ನಿರ್ದೇಶಕರಾಗಿ ದುಡಿದಿದ್ದವರು.
ಇದರ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಎನ್ ಎಸ್ ರಾಜಕುಮಾರ್ "'ಹ್ಯಾಟ್ರಿಕ್ ಹೊಡಿ ಮಗ'ದ ನಂತರ ಶಿವಣ್ಣನವರೊಂದಿಗೆ ಮತ್ತೊಂದು ಸಿನೆಮಾ ಮಾಡುತ್ತಿರುವುದಕ್ಕೆ ಸಂತಸವಾಗಿದೆ. ಈಗಿನ ಯೋಜನೆಯಂತೆ ಸಿನೆಮಾ ಸೆಪ್ಟೆಂಬರ್ ನಿಂದ ಚಿತ್ರೀಕರಣ ಪ್ರಾಂಭಿಸಲಿದೆ. ಆ ಹೊತ್ತಿಗೆ ಶಿವಣ್ಣ ತಮ್ಮ ಹಿಂದಿನ ಸಿನೆಮಾಗಳನ್ನು ಮುಗಿಸಿರುತ್ತಾರೆ" ಎನ್ನುತ್ತಾರೆ. 
ಕನ್ನಡದಲ್ಲಿ ಚೊಚ್ಚಲ ಬಾರಿಗೆ ನಿರ್ದೇಶನಕ್ಕೆ ಇಳಿಸಿರುವ ಅಶೋಕ್ ಅವರ ಈ ಸಿನೆಮಾದಲ್ಲಿ ಶಿವಣ್ಣ ಶಾಲಾ ಬಾಲಕರಾಗಿ ಕೂಡ ಕಾಣಿಸಿಕೊಳ್ಳಲಿದ್ದಾರಂತೆ. ದೊಡ್ಡ ಬಜೆಟ್ ಚಿತ್ರದಲ್ಲಿ ಸಾಕಷ್ಟು ಗ್ರಾಫಿಕ್ಸ್ ಉಪಯೋಗವಾಗಲಿದೆಯಂತೆ. ಇದಕ್ಕಾಗಿ ವಿದೇಶಿ ತಂತ್ರಜ್ಞರು ಕೂಡ ಸಿನೆಮಾ ಸೆಟ್ ಸೇರಲಿದ್ದಾರೆ. ಶಿವರಾಜ್ ಕುಮಾರ್ ಸ್ಕ್ರಿಪ್ಟ್ ಇಷ್ಟಪಟ್ಟಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT